ಬಳ್ಳಾರಿ,ಮಾ.25: 2024ರ ಲೋಕಸಭಾ ಚುನಾವಣೆ ಸನ್ನಿಹಿತವಾಗಿದೆ. ಅಧಿಕಾರದಲ್ಲಿರುವಾಗ ಜನರ ಕೆಂಗಣ್ಣಿಗೆ ಗುರಿಯಾಗುವ ಬಂಡವಾಳಶಾಹಿ ಪಕ್ಷಗಳು ಹೊಸ ಮುಖಗಳೊಂದಿಗೆ, ಹೊಸ ಗ್ಯಾರಂಟಿಗಳೊಂದಿಗೆ ಮತ್ತೆ ಜನರ ಬಳಿಗೆ ಬರುತ್ತಿವೆ. ಇನ್ನೊಂದೆಡೆ, ದುಡಿಯುವ ಜನರ, ರೈತ, ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕೆ ದಿನನಿತ್ಯ ಹೋರಾಟ ಕಟ್ಟುತ್ತಿರುವ ಎಸ್ಯುಸಿಐ ಕಮ್ಯುನಿಸ್ಟ್ ಪಕ್ಷ ಕೂಡ ಈ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧೆ ನಡೆಸುತ್ತಿದೆ. ದೇಶದ 19 ರಾಜ್ಯ ಕೇಂದ್ರಾಡಳಿತ ಪ್ರದೇಶಗಳಲ್ಲಿ ನಮ್ಮ ಪಕ್ಷವು 151 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಿದೆ. ಕರ್ನಾಟಕದಲ್ಲಿ ಈ ಬಾರಿ ಒಟ್ಟು 19 ಕ್ಷೇತ್ರಗಳಲ್ಲಿ ಸ್ಪರ್ಧೆ ನಡೆಸುತ್ತಿದೆ ಎಂದು ಜಿಲ್ಲಾ ಕಾರ್ಯದರ್ಶಿ ರಾಧಾಕೃಷ್ಣ ಉಪಾಧ್ಯ ತಿಳಿಸಿದರು.