ಕಾಲ್ನಡಿಗೆಯ ಮೂಲಕ ತೆರಳಿ ಪರಿಶೀಲನೆ

ಬಳ್ಳಾರಿ, ಮಾರ್ಚ್,1 : ಸಾರಿಗೆ,ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ಬಳ್ಳಾರಿ ನಗರದ ರಾಯಲ್ ಸರ್ಕಲ್ ನಿಂದ ಬೆಂಗಳೂರು ರಸ್ತೆಯಲ್ಲಿರುವ ಚಿಕ್ಕಮಾರ್ಕೆಟ್ ವರೆಗೆ ಕಾಲ್ನಡಿಗೆಯ ಮೂಲಕ ತೆರಳಿ ಪರಿಶೀಲನೆ ನಡೆಸಿದರು. ಈ ವೇಳೆ ರಸ್ತೆ ಮಾರ್ಗದಲ್ಲಿನ ವಿವಿಧ ವ್ಯಾಪಾರಿಗಳ ಅಹವಾಲುಗಳನ್ನು ಆಲಿಸಿ, ಸಂಬಂಧಿಸಿದ ಅಧಿಕಾರಿಗಳಿಗೆ ಚಿಕ್ಕಮಾರ್ಕೆಟ್ ನಲ್ಲಿನ ಸಮಸ್ಯೆಗಳಿಗೆ ಶೀಘ್ರವಾಗಿ ಪರಿಹಾರ ಒದಗಿಸಲು ಸೂಚಿಸಿದರು.
ಈ ಸಂದರ್ಭದಲ್ಲಿ ಬಳ್ಳಾರಿ ನಗರ ಶಾಸಕರಾದ ಜಿ. ಸೋಮಶೇಖರ್ ರೆಡ್ಡಿ, ಪಾಲಿಕೆ ಸದಸ್ಯರು, ಮುಖಂಡರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *

Translate »
Scroll to Top