ದಕ್ಷಿಣ ಕನ್ನಡ ; ಜಿಲ್ಲೆಯಿಂದ ಆಯ್ಕೆಯಾಗಿ ಬಂದಿರುವ ಕರ್ನಾಟಕ ವಿಧಾನಮಂಡಲದ ಸದಸ್ಯರು, ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ಅವರನ್ನು ಇಂದು ಭೇಟಿಯಾಗಿ, ಇತ್ತೀಚೆಗೆ ಜಿಲ್ಲೆಯಲ್ಲಿ ಕೆಲವು ಸಂಘಟನೆಗಳು ನಡೆಸುತ್ತಿರುವ ಚಟುವಟಿಕೆ ಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣ ವಾಗುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದರು. ನೆರೆಯ ಕೇರಳ ರಾಜ್ಯದಿಂದ ಆಗಮಿಸಿ, ಸ್ಥಳೀಯರ ಜೊತೆಗೆ ಸೇರಿಕೊಂಡು ಕೋಮು ಸಾಮರಸ್ಯ ಕೆಡಿಸುತ್ತಿರುವ ಶಕ್ತಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದೂ, ಬಿಜೆಪಿ ಶಾಸಕರ ನಿಯೋಗ, ಸಚಿವರಲ್ಲಿ ಮನವಿ ಮಾಡಿದ್ದಾರೆ.
ನಿಯೋಗದಲ್ಲಿ, ಸಚಿವ ಶ್ರೀ ಅಂಗಾರ, ಹರೀಶ್ ಪೂಂಜಾ, ಸಂಜೀವ್ ಮತಂದುರ್, ರಾಜೇಶ್ ನಾಯಕ್, Dr ಭರತ್ ಶೆಟ್ಟಿ, ಶ್ರೀ ಉಮಾನಾಥ ಕೋಟ್ಯಾನ್, ಶ್ರೀ ಪ್ರತಾಪಸಿಂಹ ನಾಯಕ್ ಎಂಎಲ್ಸಿ, ಅವರೂ ನಿಯೋಗದಲ್ಲಿ ಇದ್ದರು.