ಲಾರಿ ಬೈಕ್ ಡಿಕ್ಕಿ ಬೈಕ್ ಸವಾರ ಸಾವು

ಮರಿಯಮ್ಮನಹಳ್ಳಿ : ಪಟ್ಟಣ ಸಮೀಪದ ನಂದಿಬಂಡಿ ಗ್ರಾಮದ ಬಳಿ ಬುಧವಾರ ರಾತ್ರಿ ಬೈಕ್ ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟಿದ್ದು, ಹಿಂಬದಿ ಸವಾರನ ಎರಡು ಕಾಲು ಮುರಿದ ಘಟನೆ ಜರುಗಿದೆ. ಮೃತನನ್ನು ವರದಾಪುರ ಗ್ರಾಮದ ಮಂಜುನಾಥ (೨೯) ಎಂದು ಗುರುತಿಸಲಾಗಿದೆ. ಗಾಯಾಳು ಚೌಡಪ್ಪ(೪೨) ಮೆಟ್ರಿ ದೇವಲಾಪುರ ಗ್ರಾಮದ ನಿವಾಸಿಯಾಗಿದ್ದಾನೆ.

ಗಾಯಾಳನ್ನು ಹೊಸಪೇಟೆಯ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿ ವಿಮ್ಸ್‌ಗೆ ದಾಖಲಿಸಲಾಗಿದೆ. ಇವರು ನಂದಿಬಂಡಿ ಗ್ರಾಮದಿಂದ ವರದಾಪುರ ಗ್ರಾಮಕ್ಕೆ ತೆರಳುವ ಸಂದರ್ಭ ಈ ಘಟನೆ ಸಂಭವಿಸಿದೆ. ಮರಿಯಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *

Translate »
Scroll to Top