bagalakote

ಶರಣ ಎಂದರೆ ಜಾತಿ-ವರ್ಗ ಇಲ್ಲದ್ದು: ಸಿ.ಎಂ ಸಿದ್ದರಾಮಯ್ಯ

ಕೂಡಲ ಸಂಗಮ : ಬಸವಾದಿ ಶರಣರ ಆಶಯದ ಜಾತಿ ರಹಿತ ಸಮಾಜ ನಿರ್ಮಾಣ ಶರಣರಿಂದ ಸಾಧ್ಯ. ಶರಣ ಎಂದರೆ ಜಾತಿ-ವರ್ಗ ಇಲ್ಲದ್ದು. ಶರಣ ಮೇಳ ಎಂದರೆ ಜಾತಿಯಿಂದ ಮುಕ್ತರಾದ ಮನುಷ್ಯರ ಮೇಳ ಎಂದು ಸಿ.ಎಂ ಸಿದ್ದರಾಮಯ್ಯ ಅವರು ನುಡಿದರು.

ಗುರು ಕುಟೀರ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೋವಿ ಜನಾಂಗದ ಕಸುಬಾದ ಕಲ್ಲು ಒಡೆಯುವ ಮೂಲಕ ಗುರು ಕುಟೀರವನ್ನು ಉದ್ಘಾಟಿಸಿ, ಶಿಲಾಮಂಟಪದ ಶಿಲಾನ್ಯಾಸ ನೆರವೇರಿಸಿದರು.

ಜಾತಿ ಜನಗಣತಿ ಬೇಡ ಎನ್ನುವವರಿಗೂ ಅದರಲ್ಲೇನಿದೆ ಎಂದು ತಿಳಿದಿಲ್ಲ

ಬಾಗಲಕೋಟೆ : ಜಾತಿ ಜನಗಣತಿ ವರದಿ ಸಲ್ಲಿಸುವ ಮುನ್ನವೇ ಚರ್ಚೆ ಶುರುವಾಗಿದೆ. ವರದಿಯಲ್ಲೇ ಏನಿದೆ ಎಂದು ಅದನ್ನು ಬೇಡ ಎನ್ನುವವರಿಗೂ ಗೊತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕೃಷ್ಣಾ ಮೇಲ್ದಂಡೆ ಯೋಜನೆಯ ಅಚ್ಚುಕಟ್ಟು ಪ್ರದೇಶಗಳಿಗೆ ಡಿಸೆಂಬರ್10ರ ವರೆಗೂ ನೀರು

ಬೆಂಗಳೂರು: ಜಲಾಶಯಕ್ಕೆ ಒಳಹರಿವು ಬಂದಿರುವುದರಿಂದ ಕೃಷ್ಣಾ ಮೇಲ್ದಂಡೆ ಯೋಜನೆಯ ಅಚ್ಚುಕಟ್ಟು ಪ್ರದೇಶಗಳಿಗೆ ಹೆಚ್ಚು ನೀರು ಹರಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಅಬಕಾರಿ ಮತ್ತು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕೃಷ್ಣಾ ಮೇಲ್ದಂಡೆ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಆರ್.ಬಿ. ತಿಮ್ಮಾಪೂರ ಅವರು ತಿಳಿಸಿದ್ದಾರೆ.

ವಾಯವ್ಯ ಪದವೀಧರರ ಚುನಾವಣೆಗೆ ಹನಮಂತ ನಿರಾಣಿ ನಾಮಪತ್ರ ಸಲ್ಲಿಕೆ

ಬೆಳಗಾವಿ: ಬೆಳಗಾವಿ, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳ ವ್ಯಾಪ್ತಿ ಹೊಂದಿರುವ ವಾಯವ್ಯ ಪದವೀಧರರ ಕ್ಷೇತ್ರದಿಂದ ವಿಧಾನಪರಿಷನ್‌ಗೆ ನಡೆಯಲಿರುವ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಹಾಲಿ ಸದಸ್ಯ ಹನಮಂತ ನಿರಾಣಿ ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಹಾಯಕ ನಾವಣಾಧಿಕಾರಿ ವಿ. ಪಾಟೀಲ ಅವರಿಗೆ 2 ಸೆಟ್ ನಾಮಪತ್ರಗಳನ್ನು ಶುಕ್ರವಾರ ಸಲ್ಲಿಸಿದರು. ಮನೆಗೆ ರಾಜ್ಯಸಭಾ ಸದಸ್ಯ ಆದ ಕರಾಡಿ, ಮುಖದ ಆರ್.ಎಸ್. ಮುತಾಲಿಕ್, ಪಕ್ಷದ ನಗರ ಘಟಕದ ಅಧ್ಯಕ್ಷ ಶಶಿಕಾಂತ ಪಾಟೀಲ ಮೊದಲಾದವರು ಸಾಥ್ಪ ಕ್ಷದ ನಾಯಕರು ಹಾಗೂ ಕಾರ್ಯಕರ್ತರ ಆಶೀರ್ವಾದದಿಂದ ಬಿಜೆಪಿ …

ವಾಯವ್ಯ ಪದವೀಧರರ ಚುನಾವಣೆಗೆ ಹನಮಂತ ನಿರಾಣಿ ನಾಮಪತ್ರ ಸಲ್ಲಿಕೆ Read More »

ಕುಡಿಯುವ ನೀರಿನ ಉದ್ದೇಶಕ್ಕಾಗಿ 6000 ಕ್ಯೂಸೆಕ್ಸ್ ನೀರನ್ನು ನದಿಗೆ ಹರಿ ಬಿಡಲಾಗಿದೆ

ಬೆಂಗಳೂರು : ಮಲಪ್ರಭಾ ಜಲಾಶಯದಿಂದ ಇಂದು ಮುಂಜಾನೆಯಿಂದ 6000 ಕ್ಯೂಸೆಕ್ಸ್ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕಾಗಿ ನದಿಗೆ ಹರಿ ಬಿಡಲಾಗಿದೆ. ಮುಂದಿನ 15 ದಿನಗಳ ಕಾಲ ಗದಗ ಮತ್ತು ಬಾಗಲಕೋಟ ಜಿಲ್ಲೆಯ ವಿವಿಧ ಭಾಗಗಳಿಗೆ ಮತ್ತು ಗ್ರಾಮಗಳಿಗೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ನೀರನ್ನು ನದಿಗೆ ಹರಿ ಬಿಡಲಾಗಿದೆ. ದಯವಿಟ್ಟು ನೀರನ್ನು ಕೇವಲ ಕುಡಿಯುವ ನೀರಿಗಾಗಿ ಹಿತವಾಗಿ ಮಿತವಾಗಿ ಬಳಸಬೇಕೆಂದು ಕೋರುತ್ತೇನೆ. ಗೋವಿಂದ ಕಾರಜೋಳ ಜಲಸಂಪನ್ಮೂಲ ಸಚಿವರು.

ರೆಡ್ ಕ್ರಾಸ್ ಕರ್ನಾಟಕ ರಾಜ್ಯ ಶಾಖೆಯ 2022-2025ನೇ ಸಾಲಿನ ಸಭಾಪತಿ ಹಾಗೂ ಉಪಸಭಾಪತಿ ಆಯ್ಕೆ

ಬೆಂಗಳೂರು : ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಕರ್ನಾಟಕ ರಾಜ್ಯ ಶಾಖೆಯ 2022-2025ನೇ ಅವಧಿಗೆ ಸಭಾಪತಿಗಳಾಗಿ ರಾಯಚೂರು ಜಿಲ್ಲೆಯ ಶ್ರೀ ವಿಜಯಕುಮಾರ್ ಪಾಟೀಲ್ ಹಾಗೂ ಉಪಸಭಾಪತಿಗಳಾಗಿ ಬಾಗಲಕೋಟೆ ಜಿಲ್ಲೆಯ ಶ್ರೀ ಆನಂದ್ ಎಸ್. ಜಿಗಜಿನ್ನಿರವರು 30 ಜಿಲ್ಲಾ ಪ್ರತಿನಿಧಿಗಳ ಸಮ್ಮುಖದಲ್ಲಿ ಕರ್ನಾಟಕ ರೆಡ್ ಕ್ರಾಸ್ ಇತಿಹಾಸದಲ್ಲಿಯೇ ಪ್ರಪ್ರಥಮ ಬಾರಿಗೆ ಇಂದು ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು. ವಿದ್ಯಾರ್ಥಿ ಜೀವನದಲ್ಲಿಯೇ ನಾಯಕತ್ವ ಗುಣಗಳನ್ನು ಬೆಳೆಸಿಕೊಂಡಿರುವ ಶ್ರೀ ವಿಜಯ ಕುಮಾರ್ ಪಾಟೀಲ್ ರವರು ಭಾರತೀಯ ರೆಡ್ …

ರೆಡ್ ಕ್ರಾಸ್ ಕರ್ನಾಟಕ ರಾಜ್ಯ ಶಾಖೆಯ 2022-2025ನೇ ಸಾಲಿನ ಸಭಾಪತಿ ಹಾಗೂ ಉಪಸಭಾಪತಿ ಆಯ್ಕೆ Read More »

ಶ್ರೀಶೈಲದಲ್ಲಿ ಕರ್ನಾಟಕದ ಯಾತ್ರಿಗಳು ಮತ್ತು ಸ್ಥಳೀಯ ವ್ಯಾಪಾರಸ್ಥರ ಮಧ್ಯದಲ್ಲಿ ಘರ್ಷಣೆ

ಕರ್ನೂಲು,ಮಾ,31 : ಶ್ರೀಶೈಲದಲ್ಲಿ ಕರ್ನಾಟಕದ ಯಾತ್ರಿಗಳು ಮತ್ತು ಸ್ಥಳೀಯ ವ್ಯಾಪಾರಸ್ಥರ ಮಧ್ಯದಲ್ಲಿ ಘರ್ಷಣೆ ಉಂಟಾಗಿ ಹಲವು ವಾಹನಗಳು ಜಖಂ ಆಗಿದ್ದು ಇಬ್ಬರಿಗೆ ಗಾಯವಾಗಿರುವ ಘಟನೆ ಕಳವಳ ತಂದಿದೆ. ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನದ ಆವರಣದಲ್ಲಿ ಬುಧವಾರ ರಾತ್ರಿ ಕ್ಷುಲ್ಲಕ ಕಾರಣಕ್ಕೆ ಸ್ಥಳೀಯರು ಮತ್ತು ಕನ್ನಡಿಗರ ನಡುವೆ ಪ್ರಾರಂಭವಾದ ಜಗಳ ವಿಕೋಪಕ್ಕೆ ತಿರುಗಿ ಬಾಗಲಕೋಟೆ, ಬೆಳಗಾವಿ ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳ ಭಕ್ತರ ಮೇಲೆ ಹಲ್ಲೆಯಾಗಿದ್ದು, ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆಯೆಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ನಾನು ಕರ್ನೂಲ ಜಿಲ್ಲ ಪೊಲೀಸ್ …

ಶ್ರೀಶೈಲದಲ್ಲಿ ಕರ್ನಾಟಕದ ಯಾತ್ರಿಗಳು ಮತ್ತು ಸ್ಥಳೀಯ ವ್ಯಾಪಾರಸ್ಥರ ಮಧ್ಯದಲ್ಲಿ ಘರ್ಷಣೆ Read More »

ಗುಣಮಟ್ಟದ ಶಿಕ್ಷಣ

• ರಾಷ್ಟ್ರೀಯ ಶಿಕ್ಷಣ ನೀತಿ-2020ರ ಮಾರ್ಗಸೂಚಿಯಂತೆ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಮಾಧ್ಯಮಿಕ ಮತ್ತು ಪ್ರೌಢ ಶಿಕ್ಷಣ, ಶಿಕ್ಷಕರ ಶಿಕ್ಷಣ ಹಾಗೂ ವಯಸ್ಕರ ಶಿಕ್ಷಣ ಕ್ಷೇತ್ರಗಳಿಗೆ ನೂತನ ಪಠ್ಯಕ್ರಮ ರಚನೆ.• ಹೋಬಳಿ ಮಟ್ಟದಲ್ಲಿ “ಮಾದರಿ ಶಾಲೆ”ಗಳಾಗಿ ಮೂಲಭೂತ ಸೌಕರ್ಯವಿರುವ ಶಾಲೆಗಳ ಉನ್ನತೀಕರಣ.• ಸರ್ಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ 500 ಕೋಟಿ ರೂ. ಅನುದಾನ. ಆಯ್ದ ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳಿಗೆ ಆದ್ಯತೆ.• ಸರ್ಕಾರಿ ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಪೀಠೋಪಕರಣ ಒದಗಿಸಲು 100 ಕೋಟಿ ರೂ.• ‘ನೋಡಿ …

ಗುಣಮಟ್ಟದ ಶಿಕ್ಷಣ Read More »

ಉಕ್ರೇನ್‍ನಲ್ಲಿ ಸಿಲುಕಿರುವ ಬೀಳಗಿ ವೈದ್ಯಕೀಯ ವಿದ್ಯಾರ್ಥಿನಿ ಸಹನ ಪಾಟೀಲ್

ಬೀಳಗಿ,ಮಾ.1- ಯುದ್ದ ಪೀಡಿತ ಯುಕ್ರೇನ್‍ನಲ್ಲಿ ಸಿಲುಕಿರುವ ಬಾಗಲಕೋಟೆ ಜಿಲ್ಲೆ ಬೀಳಗಿ ತಾಲ್ಲೂಕಿನ ವೈದ್ಯಕೀಯ ವಿದ್ಯಾರ್ಥಿನಿ ಸಹನ ಪಾಟೀಲ್‍ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ದೂರವಾಣಿ ವಿಡಿಯೋ ಕರೆ ಮಾಡಿ ಧೈರ್ಯಗೆಡದಂತೆ ಆತ್ಮಸ್ಥೈರ್ಯ ತುಂಬಿದರು. ಇಂದು ಬೆಳಗ್ಗೆ ತಾಲ್ಲೂಕಿನ ಸುನಗ ಗ್ರಾಮದಲ್ಲಿರುವ ಸಹನಾ ತಂದೆ ಪಶು ಚಿಕಿತ್ಸಾಲಯದ ಸಹಾಯಕ ನಿರ್ದೇಶಕ ಮಲ್ಲನಗೌಡ ಪಾಟೀಲ್ ಅವರ ನಿವಾಸಕ್ಕೆ ಭೇಟಿ ನೀಡಿ, ಉಕ್ರೇನ್‍ನ ಕಾರ್ಕೀವ್ ಪಟ್ಟಣದ ವೈದ್ಯಕೀಯ ವಿದ್ಯಾರ್ಥಿನಿ ಸಹನ ಪಾಟೀಲ್ ಅವರ ಜೊತೆ ಕೆಲ …

ಉಕ್ರೇನ್‍ನಲ್ಲಿ ಸಿಲುಕಿರುವ ಬೀಳಗಿ ವೈದ್ಯಕೀಯ ವಿದ್ಯಾರ್ಥಿನಿ ಸಹನ ಪಾಟೀಲ್ Read More »

Translate »
Scroll to Top