ರಾಮನಗರ,ಜ,12 : ಮೇಕೆದಾಟು ಪಾದಯಾತ್ರೆಯ ನಾಲ್ಕನೇ ದಿನವಾದ ಇಂದು ವಿವಿಧ ಮಠಾಧೀಶರು ಮಾರ್ಗ ಮಧ್ಯೆ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಸನ್ಮಾನಿಸಿ ಪಾದಯಾತ್ರೆ ಯಶಸ್ವಿಯಾಗಲಿ ಎಂದು ಆಶೀರ್ವದಿಸಿದರು. ಆದಿಚುಂಚನಗಿರಿ ಶಾಖಾ ಮಠಗಳ ಮಠಾಧೀರಾದ ಹಾಸನದ ಶ್ರೀ ಶಂಭುನಾಥ ಸ್ವಾಮಿ, ರಾಮನಗರದ ಶ್ರೀ ಅನ್ನದಾನೇಶ್ವರ ಸ್ವಾಮಿ, ದಸರೀಘಟ್ಟದ ಶ್ರೀ ಚಂದ್ರಶೇಖರನಾಥ ಸ್ವಾಮಿ, ಕಬ್ಬಳಿಯ ಶ್ರೀ ಶಿವಪುತ್ರನಾಥ ಸ್ವಾಮಿ ಇದ್ದರು.