LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Politics News

  'ರಾಬಕೊವಿ'ಗೆ ಅಧ್ಯಕ್ಷರಾಗಿ ರಾಘವೇಂದ್ರ ಹಿಟ್ನಾಳ್ ಅವಿರೋಧವಾಗಿ ಆಯ್ಕೆ

  'ರಾಬಕೊವಿ'ಗೆ ಅಧ್ಯಕ್ಷರಾಗಿ ರಾಘವೇಂದ್ರ ಹಿಟ್ನಾಳ್ ಅವಿರೋಧವಾಗಿ ಆಯ್ಕೆ

ಒಕ್ಕೂಟದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಇಂದು ಚುನಾವಣೆ ನಿಗದಿಯಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ರಾಘವೇಂದ್ರ ಹಿಟ್ನಾಳ್, ಉಪಾಧ್ಯಕ್ಷ ಸ್ಥಾನಕ್ಕೆ ಎನ್.ಸತ್ಯನಾರಾಯಣ ಮಾತ್ರವೇ ನಾಮಪತ್ರ ಸಲ್ಲಿಸಿದರು.

ಬಳ್ಳಾರಿ: ರಾಯಚೂರು, ಬಳ್ಳಾರಿ, ಕೊಪ್ಪಳ, ವಿಜಯನಗರ (ರಾಬಕೊವಿ) ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಸ್ಥಾನಕ್ಕೆ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್ ಒಬ್ಬರೇ ನಾಮಪತ್ರ ಸಲ್ಲಿಸಿದ್ದು, ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

 

ಒಕ್ಕೂಟದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಇಂದು ಚುನಾವಣೆ ನಿಗದಿಯಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ರಾಘವೇಂದ್ರ ಹಿಟ್ನಾಳ್, ಉಪಾಧ್ಯಕ್ಷ ಸ್ಥಾನಕ್ಕೆ ಎನ್.ಸತ್ಯನಾರಾಯಣ ಮಾತ್ರವೇ ನಾಮಪತ್ರ ಸಲ್ಲಿಸಿದರು.

ಇವರಿಬ್ಬರೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಯೂ ಆದ, ಬಳ್ಳಾರಿ ಉಪವಿಭಾಗಾಧಿಕಾರಿ ಪ್ರಮೋದ್ ಘೋಷಿಸಿದರು‌. ಕೆಎಂಎಫ್‌ನ ಮಾಜಿ ಅಧ್ಯಕ್ಷ ಭೀಮ ನಾಯ್ಕ ಚುನಾವಣೆಯಿಂದ ದೂರ ಉಳಿದರು. ಒಕ್ಕೂಟದ ಒಟ್ಟು 12 ನಿರ್ದೇಶಕ ಸ್ಥಾನಗಳಲ್ಲಿ ಹಿಟ್ನಾಳ್ 7 ಮತ್ತು ಭೀಮ ನಾಯ್ಕ 5 ನಿರ್ದೇಶಕರ ಬಲ ಹೊಂದಿದ್ದರು. ಇದರ ಜತೆಗೆ ಸರ್ಕಾರ ಹಿಟ್ನಾಳ್ ಅವರನ್ನು ಒಕ್ಕೂಟಕ್ಕೆ ಎರಡು ದಿನಗಳ ಹಿಂದಷ್ಟೇ ನಾಮನಿರ್ದೇಶನ ಮಾಡಿತ್ತು. ಹೀಗಾಗಿ ಹಿಟ್ನಾಳ್‌ ಸಂಖ್ಯಾ ಬಲ 8ಕ್ಕೆ ಏರಿತ್ತು.

ಕಾಂಗ್ರೆಸ್ ಶಾಸಕ ಭೀಮಾ ನಾಯಕ್‌ಗೆ ಶೋಕಾಸ್ ನೋಟಿಸ್ | KPCC show-cause notice to MLA  Bheema Naik - Kannada Oneindia

ಶಾಸಕ ಹಿಟ್ನಾಳ ಆರಂಭಿಕ ಹೆಜ್ಜೆಯಾಗಿ ರಾಬಕೊವಿ ಒಕ್ಕೂಟದ ಅಧ್ಯಕ್ಷರಾಗಿ ಮುಂದೆ ಕೆಎಂಎಫ್‌ ಗಾದಿಯ ಮೇಲೆ ಕಣ್ಣಿಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅದಕ್ಕೆ ಬೇಕಾದ ವೇದಿಕೆಯನ್ನು ಸಿದ್ಧಪಡಿಸಿಕೊಳ್ಳುವ ಭಾಗವಾಗಿಯೇ ರಾಜ್ಯದ ವಿವಿಧ ಹಾಲು ಒಕ್ಕೂಟಗಳಲ್ಲಿರುವ ಆಪ್ತರನ್ನು ಕೆಎಂಎಫ್‌ಗೆ ನಾಮನಿರ್ದೇಶಿತ ಸದಸ್ಯರನ್ನಾಗಿ ಮಾಡಲಾಗುತ್ತಿದೆ ಎಂದು ತಿಳಿದು ಬಂದಿದೆ.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ