LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
State News

ಆನೆಯ ದಾಳಿಯಿಂದ ಬದುಕುಳಿದವನಿಗೆ 25 ಸಾವಿರ ರೂ ದಂಡ!

ಕಾಡಾನೆ ಜೊತೆಗೆ ಮಂಗಾಟ ಪ್ರದರ್ಶಿಸಿದ್ದ ಆರೋಪಿ 50 ವರ್ಷದ ಆರ್‌.ಬಸವರಾಜ್‌ನನ್ನು ನಂಜನಗೂಡಿನ ನಿವಾಸದಲ್ಲಿ ವಶಕ್ಕೆ ಪಡೆದು ವಿಚಾರಣೆ ನಡೆಸಲಾಯಿತು. ತಿಳುವಳಿಕೆ ಕೊರತೆಯಿಂದ ಕೃತ್ಯ ಎಸಗಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ ಎಂದು ಬಂಡೀಪುರ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ತಿಳಿಸಿದ್ದಾರೆ. ಸೆಲ್ಫಿ ತೆಗೆಯಲು ಹೋಗಿ ಆನೆ ದಾಳಿ, ಬದುಕುಳಿದವನಿಗೆ ಅರಣ್ಯ ಇಲಾಖೆ ಶಾ‌ಕ್!
ಹರೀಶ್‌ ಕೇರ ಹರೀಶ್‌ ಕೇರ

ಮೈಸೂರು: ಬಂಡೀಪುರ ಅರಣ್ಯದೊಳಗೆ ಆನೆಯ ಮುಂದೆ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಆನೆ ದಾಳಿಯಿಂದ ಪಾರಾಗಿದ್ದ ವ್ಯಕ್ತಿಗೆ ಅರಣ್ಯ ಇಲಾಖೆ ಶಾಕ್ ನೀಡಿದ್ದು, ಆತನನ್ನು ಬಂಧಿಸಿ 25 ಸಾವಿರ ರೂ ದಂಡ ಹೇರಿದೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದೊಳಗೆ ಹಾದುಹೋಗಿರುವ ಕೆಕ್ಕನಹಳ್ಳ ಪ್ರದೇಶದ ರಾಷ್ಟ್ರೀಯ ಹೆದ್ದಾರಿಯಲ್ಲಿ ಆನೆಯ ಮುಂದೆ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಆನೆ ದಾಳಿಯಿಂದ ಗಾಯಗೊಂಡು ಪರಾರಿಯಾಗಿದ್ದ ಆರೋಪಿಯನ್ನು ಸೋಮವಾರ ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದು 25,000 ರೂ ದಂಡ ವಿಧಿಸಿ ತಪ್ಪೊಪ್ಪಿಗೆ ಪತ್ರ ಪಡೆದಿದ್ದಾರೆ.

Tourist is Trampled by Elephant After Attempting to Take Selfie with it |  PetaPixel

ಕಾಡಾನೆ ಜೊತೆಗೆ ಮಂಗಾಟ ಪ್ರದರ್ಶಿಸಿದ್ದ ಆರೋಪಿ 50 ವರ್ಷದ ಆರ್‌.ಬಸವರಾಜ್‌ನನ್ನು ನಂಜನಗೂಡಿನ ನಿವಾಸದಲ್ಲಿ ವಶಕ್ಕೆ ಪಡೆದು ವಿಚಾರಣೆ ನಡೆಸಲಾಯಿತು. ತಿಳುವಳಿಕೆ ಕೊರತೆಯಿಂದ ಕೃತ್ಯ ಎಸಗಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ ಎಂದು ಬಂಡೀಪುರ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ತಿಳಿಸಿದ್ದಾರೆ.

ಈ ಕುರಿತು ಆರೋಪಿ ಬಸವರಾಜು ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದು, 'ಬಂಡೀಪುರ ಬಂಕಾಪುರ ದೇವಸ್ಥಾನಕ್ಕೆ ತೆರಳಿ ಮರಳುವಾಗ ಹೆದ್ದಾರಿಯಲ್ಲಿ ಆನೆ ಕಂಡು ಮೋಜು ಮಸ್ತಿಗಾಗಿ ಸೆಲ್ಫಿ ತೆಗೆದುಕೊಳ್ಳಲು ಮುಂದಾದಾಗ ಆನೆ ದಾಳಿಗೆ ಸಿಲುಕಿ ಬದುಕಿದ್ದೇ ಹೆಚ್ಚು ಅನಿಸಿದೆ. ಇಂತಹ ದುಸ್ಸಾಹಸವನ್ನು ಯಾರೂ ಮಾಡಬೇಡಿ, ಅರಣ್ಯದೊಳಗೆ ಹಾದುಹೋಗಿರುವ ಹೆದ್ದಾರಿಗಳಲ್ಲಿ ವಾಹನಗಳನ್ನು ನಿಲ್ಲಿಸಬೇಡಿ. ಶೌಚಕ್ಕೆ ಹೋಗುವುದು, ಪ್ರಾಣಿಗಳಿಗೆ ಆಹಾರ ನೀಡುವುದನ್ನು ಮಾಡಬೇಡಿ ಎಂದು ಆರೋಪಿ ಬಸವರಾಜ್ ವಿಡಿಯೊದಲ್ಲಿ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾರೆ.

ಏನಿದು ಘಟನೆ?
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೂಲಕ ಹಾದು ಹೋಗುವ ಕೆಕ್ಕನಹಳ್ಳ ಪ್ರದೇಶದ ಬಳಿ ಕಾಡಾನೆ ವಾಹನ ಅಡ್ಡಗಟ್ಟಿ ತರಕಾರಿ ತಿನ್ನುತ್ತಿದ್ದಾಗ ತಮಿಳುನಾಡಿನ ಮಧುಮಲೈಯಿಂದ ಬಂಡೀಪುರದ ಕಡೆಗೆ ಕಾರಿನಲ್ಲಿ ಬರುತ್ತಿದ್ದ ಪ್ರವಾಸಿಗ ಬಸವರಾಜು ಆನೆ ಛಾಯಾಚಿತ್ರ ತೆಗೆಯಲು ಮುಂದಾಗಿದ್ದಾರೆ. ಇದನ್ನು ಗಮನಿಸಿದ ಕಾಡಾನೆ ಆತನ ಮೇಲೆ ದಾಳಿಗೆ ಮುಂದಾಗಿದೆ. ಘಟನೆಯಲ್ಲಿ ಬಸವರಾಜು ಕಾಡಾನೆ ತುಳಿತದಿಂದ ಬಚಾವ್‌ ಆಗಿದ್ದು, ರಸ್ತೆಯಲ್ಲಿ ಬಿದ್ದ ರಭಸಕ್ಕೆ ಕಾಲು, ಕೈ ಹಾಗೂ ಮುಖಕ್ಕೆ ತರಚಿದ ಗಾಯಗಳಾಗಿದೆ. ನಂತರ ಸಹಪಾಠಿಗಳು ಆತನನ್ನು ಕಾರಿನಲ್ಲಿ ಕರೆದೊಯ್ದಿದ್ದಾರೆ. ಸಣ್ಣಪುಟ್ಟ ಗಾಯವಾದ ಹಿನ್ನೆಲೆ ನಂಜನಗೂಡಿನ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದಿದ್ದಾರೆ.

Wild elephant stomps on tourist trying to take photo in Karnataka, viral  video triggers backlash | Trending News - The Indian Express

ಸಚಿವರ ಖಡಕ್‌ ಸೂಚನೆ
ರಾಷ್ಟ್ರೀಯ ಹೆದ್ದಾರಿಯಲ್ಲಿ ಗಸ್ತು ವಾಹನ ಸಂಚರಿಸುವ ಮಾದರಿಯಲ್ಲಿ ಅರಣ್ಯದೊಳಗೆ ಹಾದುಹೋಗಿರುವ ರಸ್ತೆಗಳಲ್ಲಿ ಅರಣ್ಯ ಇಲಾಖೆಯ ಗಸ್ತು ವಾಹನಗಳನ್ನು ನಿಯೋಜಿಸಿ ಕಾನೂನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ. ವನ್ಯಜೀವಿಗಳಿಗೆ ಆಹಾರ ನೀಡದಂತೆ, ವಾಹನಗಳಿಂದ ಇಳಿಯದಂತೆ, ರಸ್ತೆಯಲ್ಲಿ ವೇಗವಾಗಿ, ಅಜಾಗರೂಕತೆಯಿಂದ ವಾಹನ ಚಲಾಯಿಸದಂತೆ ಕ್ರಮ ವಹಿಸಬೇಕು ಎಂದು ಸೂಚನೆ ನೀಡಿದ್ದಾರೆ.

 

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ