LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Local News

ಬಳ್ಳಾರಿ ಹೊರವಲಯದಲ್ಲಿ ಶೀಘ್ರ ಒಣಮೆಣಸಿನಕಾಯಿ ಶೀತಲ ಗೃಹ

ಬಳ್ಳಾರಿ: ಜಿಲ್ಲೆಯ ಮೆಣಸಿನಕಾಯಿ ಬೆಳೆಯುವ ರೈತರಿಗೆ ಸಿಹಿಸುದ್ದಿ. ಬಳ್ಳಾರಿ ಹೊರವಲಯದ ಆಲದಹಳ್ಳಿಯಲ್ಲಿ ಒಣಮೆಣಸಿನ ಕಾಯಿ ಮಾರುಕಟ್ಟೆಗೆಂದು ಮೀಸಲಟ್ಟಿರುವ ಜಾಗದಲ್ಲಿ ಶೀತಗೃಹ ನಿರ್ಮಿಸಲು ಕೃಷಿ ಮಾರುಕಟ್ಟೆ ಇಲಾಖೆ ಮುಂದಾಗಿದೆ.
ಒಟ್ಟು 3000 ಮೆಟ್ರಿಕ್ ಟನ್ ಸಾಮರ್ಥ್ಯದ ಈ ಶೀತಲಗೃಹವು ಒಣಮೆಣಸಿನ ಕಾಯಿ ಮಾರುಕಟ್ಟೆಗೆ ಮುನ್ನುಡಿ ಎಂದು ಬಳ್ಳಾರಿ ಕೃಷಿ ಉತ್ಪನ್ನ ಮಾರುಕಟ್ಟಡ ಸಮಿತಿಯ ಕಾರ್ಯದರ್ಶಿ ನಂಜುAಡಸ್ವಾಮಿ ತಿಳಿಸಿದ್ದಾರೆ.
ಈಗಾಗಲೇ ಟೆಂಡರ್ ಪ್ರಕ್ರಿಯೆ ಆರಂಭವಾಗಿದ್ದು, ಒಂದು ವರ್ಷದ ಒಳಗಾಗಿ ಶೀತಲಗೃಹ ಬಳಕೆಗೆ ಸಿಗುವ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ.
ಜಿಲ್ಲೆಯಲ್ಲಿ ಈಗಾಗಲೇ ಖಾಸಗಿಯವರ 30-35 ಶೀತಲಗೃಹಗಳಿವೆ. ಆದರೂ, ಕಡಿಮೆ ಬಾಡಿಗೆ, ಹೆಚ್ಚಿನ ದಾಸ್ತಾನು ಶೇಖರಣೆಗೆ ಸರ್ಕಾರದ ಶೀತಲಗೃಹ ಅತ್ಯಗತ್ಯವಾಗಿದೆ. ಆಲದಹಳ್ಳಿಯಲ್ಲಿ ಒಣಮೆಣಸಿನಕಾಯಿ ಮಾರುಕಟ್ಟೆ ನಿರ್ಮಿಸಬೇಕು ಎಂಬುದು ಇಲಾಖೆಯ ಉದ್ದೇಶ. ಮೊದಲ ಹಂತವಾಗಿ ಶೀತಲಗೃಹ ನಿರ್ಮಿಸಲಾಗುತ್ತಿದೆ ಎಂದು ಅವರು ತಿಳಿಸಿದರು.
ಒಟ್ಟು 11.75 ಕೋಟಿ ವೆಚ್ಚದಲ್ಲಿ ಶೀತಲಗೃಹ ನಿರ್ಮಾಣ ಮಾಡಲಾಗುತ್ತಿದ್ದು, ನಬಾರ್ಡ್ನಿಂದ 11.16 ಸಾಲ ಸೌಲಭ್ಯ ಸಿಗಲಿದೆ.
ಜಿಲ್ಲೆಯಲ್ಲಿ ಮೆಣಸಿನಕಾಯಿ ಮಾರುಕಟ್ಟೆ ನಿರ್ಮಾಣ ಮಾಡಬೇಕು ಎಂಬುದು ಈ ಭಾಗದ ರೈತರ ಬಹುವರ್ಷಗಳ ಬೇಡಿಕೆಯಾಗಿದೆ. ಹೀಗಾಗಿ ಕೋಲ್ಡ್ ಸ್ಟೋರೇಜ್ ಜತೆಗೆ ಮೆಣಸಿನಕಾಯಿ ಮಾರುಕಟ್ಟೆಯನ್ನೂ ನಿರ್ಮಾಣ ಮಾಡಬೇಕೆಂದು ರೈತರ ಒತ್ತಾಯವಾಗಿದೆ.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ