LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Entertainment News

ಆಪರೇಷನ್ ಡ್ರೀಮ್ ಥಿಯೇಟರ್ 666ರ ಏಜೆಂಟ್ ನಟಿ ಅದಿತಿ ಬಾಲನ್

ಬೆಂಗಳೂರು : ನಿರ್ದೇಶಕ ಹೇಮಂತ್ ರಾವ್ ಅವರ ಆಪರೇಷನ್ ಡ್ರೀಮ್ ಥಿಯೇಟರ್ 666 ಚಿತ್ರ ತಂಡವು ತಮ್ಮ ಬೊಕ್ಕಸದಿಂದ ಮತ್ತೊಂದು ಪ್ರಮುಖ ಪಾತ್ರವನ್ನು ಘೋಷಿಸಿದೆ. ಖ್ಯಾತ ನಟಿ, ತಮಿಳಿನ ರಾಜ್ಯ ಪ್ರಶಸ್ತಿ ಪುರಸ್ಕೃತೆ, ಅದಿತಿ ಬಾಲನ್ ಅವರು ಏಜೆಂಟ್ ಕಾವೇರಿಯಾಗಿ ಕಾಣಿಸಿಕೊಳ್ಳಲಿದ್ದಾರೆ.
ಅದಿತಿ ಬಾಲನ್ 'ಅರುವಿ' ಎಂಬ ತಮ್ಮ ಮೊದಲ ಚಿತ್ರದಲ್ಲಿ ಉತ್ತಮ ಅಭಿನಯದಿಂದ ಎಲ್ಲರ ಮನೆಮಾತಾಗಿದ್ದರು. ತದನಂತರ ಕ್ಯಾಪ್ಟನ್ ಮಿಲ್ಲರ್, ಪಡವೆಟ್ಟು ಮುಂತಾದ ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಇದೀಗ 'ಆಪರೇಷನ್ ಡ್ರೀಮ್ ಥಿಯೇಟರ್ 666'ನಲ್ಲಿ ಏಜೆಂಟ್ ಕಾವೇರಿಯಾಗಿ ಕಾಣಿಸಿಕೊಳ್ಳಲಿದ್ದಾರೆ.
'ಆಪರೇಷನ್ ಡ್ರೀಮ್ ಥಿಯೇಟರ್ 666' ಚಿತ್ರವು ಈಗಾಗಲೇ ತನ್ನ ಪಾತ್ರಗಳ ಮೂಲಕವೇ ಪ್ರೇಕ್ಷಕರ ಕುತೂಹಲಕ್ಕೆ ಕಾರಣವಾಗಿದೆ. ಡಾ‌ ಶಿವರಾಜಕುಮಾರ್ ಅವರು ಏಜೆಂಟ್ ಪ್ರಕಾಶ್ ಆಗಿ ಕಾಣಿಸಿಕೊಂಡಿದ್ದು ಅವರ ಅಭಿಮಾನಿಗಳ ಹೃದಯ ಗೆದ್ದಿತ್ತು. ಅವರ ಈ ಪಾತ್ರವು ಆಪರೇಷನ್ ಡೈಮಂಡ್ ರಾಕೆಟ್ ಚಿತ್ರದಲ್ಲಿ ಡಾ|| ರಾಜಕುಮಾರ್ ಅವರ ಪಾತ್ರಕ್ಕೆ ಗೌರವ ಸಲ್ಲಿಸುವುದು.
ನಂತರ ಚಿತ್ರ ತಂಡವು ನಟರಾಕ್ಷಸ ಡಾಲಿ ಧನಂಜಯ್‌ ಅವರನ್ನು ಏಜೆಂಟ್ ಶಂಕರ್ ಆಗಿ ಪರಿಚಯಿಸಿತು. ಇದೀಗ ನಟಿ ಅದಿತಿ ಬಾಲನ್ ಅವರನ್ನು ಪರಿಚಯಿಸಿರುವುದು ಪ್ರೇಕ್ಷಕರ ಕುತೂಹಲಕ್ಕೆ ಕಾರಣವಾಗಿದೆ.
ಈ‌ ಚಿತ್ರವು ಈಗಷ್ಟೇ ಚಿತ್ರೀಕರಣದ ಐದನೇ ಶೆಡ್ಯೂಲನ್ನು ಮುಗಿಸಿದ್ದು, ಇದೀಗ ತನ್ನ ಪೋಸ್ಟ್ ಪ್ರೊಡಕ್ಷನ್ ಹಂತಕ್ಕೆ ಕಾಲಿಡುತ್ತಿದೆ. ಡಾ ವೈಶಾಖ್ ಜೆ ಗೌಡ, ವೈಶಾಖ್ ಜೆ ಫಿಲಂಸ್ ಲಾಂಛನದಲ್ಲಿ ನಿರ್ಮಾಣ ಮಾಡಿರುತ್ತಾರೆ. ಈ ಚಿತ್ರಕ್ಕೆ ಚರಣ್ ರಾಜ್ ಸಂಗೀತ ನಿರ್ದೇಶನ ಮಾಡಿದ್ದು, ಅದ್ವೈತ ಗುರುಮೂರ್ತಿ ಮುಖ್ಯ ಛಾಯಾಗ್ರಹರಾಗಿ, ವಿಶ್ವಾಸ್ ಕಶ್ಯಪ್ ಪ್ರೊಡಕ್ಷನ್ ವಿನ್ಯಾಸ ಮಾಡಿದ್ದು, ಇಂಚರ ಸುರೇಶ್ ವಸ್ತ್ರ ವಿನ್ಯಾಸ ಮಾಡಿರುತ್ತಾರೆ.
'ಆಪರೇಷನ್ ಡ್ರೀಮ್ ಥಿಯೇಟರ್ 666' ಒಂದು ಆಕ್ಷನ್, ಡ್ರಾಮಾ ಮತ್ತು ಥ್ರಿಲ್ನ ನೂತನ ಪ್ರಯತ್ನವಾಗಿರುತ್ತದೆ. ಏಜೆಂಟ್ಗಳನ್ನು ಮುಖ್ಯ ಪಾತ್ರಗಳಲ್ಲಿ ಹೊಂದಿರುವ ಈ ಚಿತ್ರವು ಒಂದು ವಿಭಿನ್ನವಾದ ಥ್ರಿಲ್ ಅನುಭವವನ್ನು ಪ್ರೇಕ್ಷಕರಿಗೆ ನೀಡಲಿದೆ. ಇದೇ ವರ್ಷದಲ್ಲಿ ಕನ್ನಡ ಹಾಗೂ ತೆಲುಗಿನಲ್ಲ ಚಿತ್ರವನ್ನು ಬಿಡುಗಡೆ ಮಾಡಬೇಕೆಂಬುದು ಚಿತ್ರ ತಂಡದ ಗುರಿಯಾಗಿದೆ.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ