LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Crime News

ಚಿತ್ರನಟಿ ರನ್ಯಾ ರಾವ್‌ ಚಿನ್ನ ಕಳ್ಳಸಾಗಣೆ ಪ್ರಕರಣ: ಆಘಾತಕಾರಿ ವಿವರಗಳು ಬಹಿರಂಗ

ಬೆಂಗಳೂರು: ಹಿರಿಯ ಪೊಲೀಸ್‌‍ ಅಧಿಕಾರಿಯ ಮಲಪುತ್ರಿ ಹಾಗೂ ಚಿತ್ರನಟಿ ರನ್ಯಾ ರಾವ್‌ ಅವರ ಬೃಹತ್‌ ಚಿನ್ನ ಕಳ್ಳಸಾಗಣೆ ಕಾರ್ಯಾಚರಣೆಯ ತನಿಖೆಯು ಅವರ ಕಾರ್ಯವಿಧಾನದ ಬಗ್ಗೆ ಆಘಾತಕಾರಿ ವಿವರಗಳನ್ನು ಬಹಿರಂಗಪಡಿಸಿದೆ. ಒಮ್ಮೆ ದುಬೈ ಪ್ರವಾಸ ಕೈಗೊಂಡರೆ 10 ರಿಂದ 12 ಲಕ್ಷ ರೂಪಾಯಿ ಲಾಭಗಳಿಸುತ್ತಿದ್ದ ಮಾಹಿತಿ ಹೊರ ಬಿದ್ದಿದೆ.
ಬೆಂಗಳೂರು ವಿಮಾನ ನಿಲ್ದಾಣದಲ್ಲಿ 12.56 ಕೋಟಿ ಮೌಲ್ಯದ ಚಿನ್ನದ ಗಟ್ಟಿಗಳೊಂದಿಗೆ ಬಂಧಿಸಲ್ಪಟ್ಟ ರನ್ಯಾ ರಾವ್‌ ಕಳೆದ ಒಂದು ವರ್ಷದಲ್ಲಿ 30 ಬಾರಿ ದುಬೈಗೆ ಪ್ರಯಾಣಿಸಿದ್ದಾರೆ. ಒಟ್ಟಾರೆಯಾಗಿ, ಡಿಆರ್‌ಐ ಆಕೆಯ ಬೆಂಗಳೂರಿನ ನಿವಾಸದ ಮೇಲೆ ದಾಳಿ ನಡೆಸಿ 2.06 ಕೋಟಿ ರೂ.ಮೌಲ್ಯದ ಚಿನ್ನದ ಆಭರಣಗಳು ಮತ್ತು 2.67 ಕೋಟಿ ರೂ.ನಗದು ವಶಪಡಿಸಿಕೊಂಡ ನಂತರ 17.29 ಕೋಟಿ ರೂ.ಗಳನ್ನು ವಶಪಡಿಸಿಕೊಂಡಿದೆ.

ನಟಿಯ ಮಲ ತಂದೆ, ಡಿಜಿಪಿ ರಾಮಚಂದ್ರ ರಾವ್‌, ತನ್ನ ಮಲ ಮಗಳು ತನ್ನ ಗಂಡನೊಂದಿಗೆ ಪ್ರತ್ಯೇಕವಾಗಿ ವಾಸಿಸುತ್ತಿದ್ದಳು ಎಂದು ಹೇಳಿದ್ದಾರೆ. ಕುತೂಹಲಕಾರಿ ಸಂಗತಿಯೆಂದರೆ, ಡಿಜಿಪಿ ರಾಮಚಂದ್ರ ರಾವ್‌ ಅವರು ಹಲವಾರು ವರ್ಷಗಳ ಹಿಂದೆ ಮೈಸೂರಿನಲ್ಲಿ ಚಿನ್ನದ ಆಭರಣಗಳನ್ನು ದರೋಡೆ ಮಾಡಿದ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಲಾಗಿತ್ತು. ಈವರೆಗೆ ಮೂರು ಚಿತ್ರಗಳಲ್ಲಿ ನಟಿಸಿರುವ ರನ್ಯ ರಾವ್‌ ಕಳೆದ ಒಂದು ವರ್ಷದಲ್ಲಿ 30 ಬಾರಿ ದುಬೈಗೆ ಪ್ರಯಾಣಿಸಿ ವಾಪಸ್‌‍ ಬಂದಿದ್ದಾರೆ. ಅವರ ಬಳಿ ಭಾರೀ ಪ್ರಮಾಣದ ಚಿನ್ನ ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ. ಕಳ್ಳಸಾಗಣೆ ಮಾಡಿದ ಚಿನ್ನಕ್ಕೆ ನಟಿಗೆ ಪ್ರತಿ ಕೆ.ಜಿ.ಗೆ 1 ಲಕ್ಷ ರೂ. ನೀಡಲಾಗುತ್ತಿತ್ತು. ಹೀಗಾಗಿ, ಅವರು ಪ್ರತಿ ಟ್ರಿಪ್‌ಗೆ ಸುಮಾರು 12 ರಿಂದ 13 ಲಕ್ಷ ರೂ.ಗಳನ್ನು ಗಳಿಸಿದ್ದಾರೆ ಎಂದು ಆರೋಪಿಸಲಾಗಿದೆ.

ವಿಮಾನ ನಿಲ್ದಾಣದ ಭದ್ರತೆಯಿಂದ ತಪ್ಪಿಸಿಕೊಳ್ಳಲು ಚಿನ್ನವನ್ನು ಕಳ್ಳಸಾಗಣೆ ಮಾಡಲು ರಾವ್‌ ಮಾರ್ಪಡಿಸಿದ ಜಾಕೆಟ್‌ಗಳು ಮತ್ತು ಸೊಂಟದ ಬೆಲ್‌್ಟಗಳನ್ನು ಬಳಸಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಕಳೆದ ಕೆಲವು ವಾರಗಳಿಂದ, ನಟಿ ಆಗಾಗ್ಗೆ ದುಬೈಗೆ ಭೇಟಿ ನೀಡುತ್ತಿದ್ದ ಹಿನ್ನೆಲೆಯಲ್ಲಿ ಅವರ ಮೇಲೆ ಅಧಿಕಾರಿಗಳು ಕಣ್ಣಿಟ್ಟಿದ್ದರು.ವಿಮಾನ ನಿಲ್ದಾಣ ಠಾಣೆ ಪೊಲೀಸ್‌‍ ಕಾನ್‌್ಸಟೆಬಲ್‌ ಒಬ್ಬರು ರನ್ಯಾಗೆ ಭದ್ರತಾ ತಪಾಸಣೆಯನ್ನು ತಪ್ಪಿಸಲು ಸಹಾಯ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ರಾಜಕೀಯ ವ್ಯಕ್ತಿಗಳು, ಉದ್ಯಮಿಗಳು ಮತ್ತು ಪೊಲೀಸ್‌‍ ಅಧಿಕಾರಿಗಳನ್ನು ಒಳಗೊಂಡಿರುವ ದೊಡ್ಡ ಕಳ್ಳಸಾಗಣೆ ಜಾಲದೊಂದಿಗೆ ರನ್ಯಗೆ ಸಂಪರ್ಕವಿದೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ