LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
State News

ಹರಿಶ್ಚಂದ್ರ ಬಳಿಕ ಕುಮಾರಸ್ವಾಮಿಯವರೇ ಸತ್ಯಹರಿಶ್ಚಂದ್ರ: ಸಚಿವ ಎನ್ ಚಲುವರಾಯಸ್ವಾಮಿ ತಿರುಗೇಟು

ಬೆಂಗಳೂರು: ಹರಿಶ್ಚಂದ್ರ ಹೋದ ಬಳಿಕ ಕುಮಾರಸ್ವಾಮಿಯವರೇ ಸತ್ಯಹರಿಶ್ಚಂದ್ರ. ಲಂಚ ಮುಟ್ಟದೆ, ಭ್ರಷ್ಟಾಚಾರ ಮಾಡದೆ ಇರುವವರು ಇವರೊಬ್ಬರೆ ಅನ್ಸುತ್ತೆ ಎಂದು ಕುಮಾರಸ್ವಾಮಿ ಅವರ 60% ಲಂಚ ಆರೋಪಕ್ಕೆ ಸಚಿವ ಎನ್ ಚಲುವರಾಯಸ್ವಾಮಿ ತಿರುಗೇಟು ನೀಡಿದ್ದಾರೆ.

ಕೆರಗೋಡು ಪೊಲೀಸ್ ಠಾಣಾ ಆವರಣದಲ್ಲಿ ನಿರ್ಮಾಣವಾಗಿರುವ ನೂತನ ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿಯನ್ನು ಸಚಿವ ಎನ್. ಚಲುವರಾಯಸ್ವಾಮಿ ಟೇಪ್ ಕಟ್ ಮಾಡುವ ಮೂಲಕ ಉದ್ಘಾಟಿಸಿದರು. ಸಚಿವರಿಗೆ ಶಾಸಕ ಗಣಿಗ ರವಿಕುಮಾರ್, ಐಜಿಪಿ ಬೋರಲಿಂಗಯ್ಯ, ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಸಾಥ್ ನೀಡಿದರು. ಇದೇ ವೇಳೆ ಗಿಡ ನೆಟ್ಟು ನೀರೆರೆದರು.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಚಪಲಕ್ಕೆ, ಚಟಕ್ಕೆ ಮಾತನಾಡ್ತಾರೆ. ಕೇಂದ್ರ ಸಚಿವರು ಮಾತನಾಡಿದ್ರೆ ಉತ್ತರ ನೀಡಲು ನಾವು ತಡಕಾಡಬೇಕು. ಆತರ ಅವರು ಮಾತನಾಡಿದಾಗ ನಮಗೂ ಖುಷಿಯಾಗುತ್ತದೆ. ಆದರೆ ಇವರು ಬಾಯಿ ಚಪಲಕ್ಕೆ ಮಾತನಾಡ್ತಾರೆ‌. ಅವರಿಗೆ ಉತ್ತರ ಕೊಡಬೇಕು ಎನಿಸಲ್ಲ ಎಂದು ಟೀಕಿಸಿದರು.

ಜನರ ತೀರ್ಮಾನ ಅಂತಿಮ ಅನ್ನುವುದನ್ನ ಹೆಚ್ಡಿಕೆ ನಂಬ್ತಾರಾ? ಕಳೆದ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಗೆದ್ದಿದೆ. ಎಲ್ಲಾ ಸರ್ವೆಗಳನ್ನು ಮೀರಿ ಜನರು ಕಾಂಗ್ರೆಸ್‌ ಬೆಂಬಲಿಸಿದ್ದಾರೆ. ಈ ಫಲಿತಾಂಶ ಸರ್ಕಾರದ ಮೇಲಿನ ಜನರಿಗಿರುವ ವಿಶ್ವಾಸ ತೋರಿಸುತ್ತದೆ ಎಂದು ಹೇಳಿದರು.

ಕೇಂದ್ರ ಸಚಿವರು ಅವರ ಗೌರವಕ್ಕೆ ತಕ್ಕಂತೆ ಮಾತನಾಡಬೇಕು. ಟೀಕೆ ಮಾಡುವುದೇ ನಾಯಕತ್ವ ಎನ್ನುವ ರೀತಿ ಮಾತನಾಡಬಾರದು. ರಾಜ್ಯ ಸರ್ಕಾರ ಕಾರು ಕೊಟ್ಟಿಲ್ಲ ಎಂದು ಮಾತನಾಡ್ತಾರೆ. ಕುಮಾರಸ್ವಾಮಿಯಿಂದ ಈ ರೀತಿಯ ಮಾತು ನಾನು ನಿರೀಕ್ಷೆ ಮಾಡಿರಲಿಲ್ಲ. ನಾನು ಸಂಸದನಾಗಿದ್ದಾಗ ಅಂಬರೀಶ್ ಬಳಸುತ್ತಿದ್ದ ಕಾರು ಕೊಟ್ಟಿದ್ರು‌. ಹೊಸ ಕಾರು ಬರಲು ವರ್ಷ ಬೇಕಾಯ್ತು. ಸಚಿವನಾದ ಮೇಲೂ ಹಳೆಯ ಕಾರನ್ನೇ ಬಳಸುತ್ತಿದ್ದೆ. ಕಾರು ಕೊಡಲು ಸರ್ಕಾರ ಕೆಲವು ನಿಯಮಗಳನ್ನು ಅನುಸರಿಸಬೇಕು. ಕುಮಾರಸ್ವಾಮಿಯ ಇಂತಹ ಮಾತುಗಳಿಗೆ ನಾವು ಉತ್ತರ ಕೊಡುವ ಅವಶ್ಯಕತೆ ಇಲ್ಲ ಎಂದರು.

ಬಸ್ ದರ ಏರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ, 15 ವರ್ಷ ಆಗಿದೆ ಬಸ್ ದರ ಪರಿಷ್ಕರಣೆ ಆಗಿ. ಪೆಟ್ರೋಲ್, ಡಿಸೇಲ್ ದರ ಹೆಚ್ಚಾಗಿದೆ. ಬಸ್ ದರ ಜಾಸ್ತಿ ಮಾಡದಿದ್ರೆ ನಿಗಮ ನಡೆಸುವುದು ಹೇಗೆ?. ಇತರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದ ಬಸ್ ದರ ಕಡಿಮೆ ಇದೆ.‌ ಗ್ಯಾರಂಟಿಗೂ ಬಸ್ ದರ ಹೆಚ್ಚಳಕ್ಕೂ ಸಂಬಂಧ ಇಲ್ಲ. ಗ್ಯಾರಂಟಿ ನಿಲ್ಲಿಸಿ, ನಡೆಸಿ ಎನ್ನಲು ಇವರು ಯಾರು? ವಿರೋಧಪಕ್ಷದವರನ್ನ ಕೇಳಿ ಗ್ಯಾರಂಟಿ ನಿಲ್ಲಿಸಲು ಆಗಲ್ಲ. ಜನಸಾಮಾನ್ಯರು ಗ್ಯಾರಂಟಿ ಬೇಡ, ಅಭಿವೃದ್ಧಿ ಬೇಕು ಎಂದಾಗ ಸರ್ಕಾರ ಯೋಚಿಸಲಿದೆ ಎಂದು ಹೇಳಿದರು.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ