LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Local News

ಅಂಜನಾದ್ರಿ ಬೆಟ್ಟದಲ್ಲಿ 18ರ ಯುವಕ ಹೃದಯಸ್ತಂಭನದಿಂದ ಸಾವು

ಕೊಪ್ಪಳ:ಗಂಗಾವತಿ ತಾಲೂಕಿನ ಪ್ರಮುಖ ಧಾರ್ಮಿಕ ತಾಣವಾಗಿರುವ ಚಿಕ್ಕರಾಂಪುರದ ಬಳಿ ಇರುವ ಅಂಜನಾದ್ರಿ ದೇಗುಲವನ್ನು ಮೆಟ್ಟಿಲುಗಳ ಮೂಲಕ ಏರುವಾಗ ಹೃದಯಾಘಾತಕ್ಕೀಡಾದ ಯುವಕನೊಬ್ಬ ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ.

ಮೃತ ಯುವಕನನ್ನು ಕೊಪ್ಪಳದ ಜಿಲ್ಲಾಡಳಿತ ಭವನದಲ್ಲಿರುವ ಯುವಜನಸೇವಾ ಇಲಾಖೆಯ ತರಬೇತಿದಾರ ಸುರೇಶ್ ಯಾದವ್ ಪುತ್ರ ಜಯೇಶ ಯಾದವ್ (18) ಎಂದು ಗುರುತಿಸಲಾಗಿದೆ. ಈ ಯುವಕ ಅಂಜನಾದ್ರಿ ಸಮೀಪದ ಮತ್ತೊಂದು ಪುಣ್ಯ ಕ್ಷೇತ್ರ ಹುಲಗಿಯ ನಿವಾಸಿ ಎಂದು ತಿಳಿದು ಬಂದಿದೆ.

ಪ್ರೌಢ ಶಾಲೆ ಮತ್ತು ಕಾಲೇಜು ಹಂತದಲ್ಲಿ ತನ್ನೊಂದಿಗೆ ವಿದ್ಯಾಭ್ಯಾಸ ಮಾಡಿದ ಸ್ನೇಹಿತರೊಂದಿಗೆ ಅಂಜನಾದ್ರಿಯ ಹನುಮಪ್ಪನ ದರ್ಶನಕ್ಕೆಂದು ಬಂದಿದ್ದಾನೆ. ಬೆಟ್ಟ ಏರುವಾಗ ಎದುರುಸಿರು ಹಾಕುತ್ತಿದ್ದ ಯುವಕನಿಗೆ ಇದ್ದಕ್ಕಿದ್ದಂತೆ ಹೃದಯ ಸ್ತಂಭನವಾಗಿದೆ. ಸಹಪಾಠಿ ಸ್ನೇಹಿತರು ಹಾಗೂ ಹನುಪ್ಪನ ದರ್ಶನಕ್ಕೆ ಬಂದಿದ್ದ ಸಹಯಾತ್ರಿಕರು, ಹೃದಯ ಸ್ತಂಭನಕ್ಕೆ ಒಳಗಾದ ಯುವಕನಿಗೆ ಪ್ರಾಥಮಿಕ ಚಿಕಿತ್ಸೆ ಕೊಟ್ಟರೂ ಫಲಕಾರಿಯಾಗಿಲ್ಲ. ಯುವಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.

ಅಂಜನಾದ್ರಿ ಬೆಟ್ಟದಲ್ಲಿನ ದೇಗುಲದ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಧಾವಿಸಿ ಜಯೇಶನನ್ನು ಆನೆಗೊಂದಿ ಸರ್ಕಾರಿ ಆಸ್ಪತ್ರೆಗೆ ಕರೆತಂದಿದ್ದಾರೆ. ಆದರೆ, ಅಲ್ಲಿನ ವೈದ್ಯರು, ಪರಿಶೀಲಿಸಿ ಯುವಕ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. ಬಳಿಕ ಮೃತ ಯುವಕನ ಪಾರ್ಥಿವ ಶರೀರವನ್ನು ಶವಪರೀಕ್ಷೆಗಾಗಿ ಗಂಗಾವತಿಯ ಉಪ ವಿಭಾಗದ ಆಸ್ಪತ್ರೆಗೆ ರವಾನಿಸಲಾಗಿದೆ.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ