LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Politics News

2000 ಕೋಟಿ ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಹಣವಿಲ್ಲದೆ ಮಾಡಲು ಸಾಧ್ಯವೇ ?: ಮುಖ್ಯಮಂತ್ರಿ ಸಿದ್ದರಾಮಯ್ಯ

ಚಿಕ್ಕಬಳ್ಳಾಪುರ(ಶಿಡ್ಲಘಟ್ಟ) : ಬಿಜೆಪಿಯವರು ಸರ್ಕಾರದ ಬಳಿ ಹಣವಿಲ್ಲ ಎನ್ನುತ್ತಾರೆ. 2000 ಕೋಟಿ ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಹಣವಿಲ್ಲದೆ ಮಾಡಲು ಸಾಧ್ಯವೇ ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

ಅವರು ಇಂದು ಶಿಡ್ಲಘಟ್ಟದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಬಿಜೆಪಿ ಅಪಪ್ರಚಾರ
ಚಿಕ್ಕಬಳ್ಳಾಪುರ ಜಿಲ್ಲೆ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅಭಿವೃದ್ಧಿ ಕೆಲಸಗಳಿಗೆ ವೆಚ್ಚ ಮಾಡಲಾಗುತ್ತಿದೆ. ಚಿಕ್ಕಬಳ್ಳಾಪುರದಲ್ಲಿ ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಮಾಡುತ್ತಿದ್ದೇವೆ . ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ. ಸುಳ್ಳು ಬಿಟ್ಟರೆ ಬೇರೇನೂ ಹೇಳಲು ಬರುವುದಿಲ್ಲ. ಸುಳ್ಳೇ ಅವರ ಮನೆ ದೇವರು ಎಂದರು.

ನುಡಿದಂತೆ ನಡೆಸಿದ್ದೇವೆ
ಗ್ಯಾರಂಟಿ ಯೋಜನೆಗಳಿಗೆ ಒಂದು ಲಕ್ಷ ಕೋಟಿ ರೂಗಳಿಗೂ ಹೆಚ್ಚು ಹಣವನ್ನು ವೆಚ್ಚ ಮಾಡಲಾಗಿದೆ. ನಾವು ನುಡಿದಂತೆ ನಡೆದ ಸರ್ಕಾರ ಎಂದು ಹೇಳಿದ್ದೆವು. ಅದರಂತೆ ನಡೆದಿದ್ದೇವೆ ಎಂದರು.

ಪಕ್ಷದ ವರಿಷ್ಠರ ತೀರ್ಮಾನಕ್ಕೆ ನಾನು ಡಿ.ಕೆ.ಶಿವಕುಮಾರ್ ಬದ್ಧರಾಗಬೇಕು
ಅಧಿಕಾರ ಹಂಚಿಕೆಗೆ ಸಂಬಂಧಿಸಿದಂತೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ನಮ್ಮಲ್ಲಿ ಹೈ ಕಮಾಂಡ್ ಏನು ತೀರ್ಮಾನ ಮಾಡ್ತಾರೋ ಅದರಂತೆ ನಾನು ಹಾಗೂ ಡಿ. ಕೆ.ಶಿವಕುಮಾರ್ ಒಪ್ಪಬೇಕು ಎಂದರು.

ಪಕ್ಷದ ವರಿಷ್ಠರ ತೀರ್ಮಾನದಂತೆ ನಡೆಯುವೆವು
ಹೈ ಕಮಾಂಡ್ ಐದು ತಿಂಗಳ ಹಿಂದೆ ಭೇಟಿಯಾದಾಗ. ಸಚಿವ ಸಂಪುಟ ಪುನರ್ ರಚನೆ ಮಾಡಲು ಸೂಚನೆ ನೀಡಿದ್ದರು. ನಾನು ಎರಡೂವರೆ ವರ್ಷ ತುಂಬಿದ ನಂತರ ಮಾಡೋಣ ಎಂದು ತಿಳಿಸಿದ್ದೆ. ಈಗ ಏನು ಸೂಚನೆ ನೀಡುತ್ತಾರೋ ಅದರಂತೆ ನಡೆಯುತ್ತೇವೆ ಎಂದರು.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ