LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
State News

ಅನ್ನಭಾಗ್ಯ ಯೋಜನೆ: ನೇರ ನಗದು ವರ್ಗಾವಣೆ ಬದಲು ಅಕ್ಕಿ ವಿತರಣೆ

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಯಡಿ ಪ್ರಸ್ತುತ ರಾಜ್ಯದಲ್ಲಿರುವ ಅಂತ್ಯೋದಯ ಅನ್ನಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗೆ ಪ್ರತಿ ತಿಂಗಳು ಪಡಿತರ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ ಮುಖಾಂತರ ಹಣವನ್ನು ವರ್ಗಾಯಿಸುವ ಪ್ರಕ್ರಿಯೆಯ ಬದಲಾಗಿ ಫೆಬ್ರವರಿ-2025 ರ ಮಾಹೆಯಿಂದ ಜಾರಿಗೆ ಬರುವಂತೆ ಅರ್ಹ ಫಲಾನುಭವಿಗಳಿಗೆ 5 ಕೆ.ಜಿ ಅಕ್ಕಿಯನ್ನು ಸಾರ್ವಜನಿಕ ವಿತರಣಾ ಪದ್ಧತಿಯಡಿ ವಿತರಿಸಲು ಸರ್ಕಾರ ಆದೇಶಿಸಿದೆ.

ಅದರಂತೆ ಫೆಬ್ರವರಿ-2025 ಮಾಹೆಯಲ್ಲಿ ವಿತರಿಸಬೇಕಾದ ಅಕ್ಕಿ ಪ್ರಮಾಣವನ್ನು ಸೇರಿ ಮಾರ್ಚ್-2025 ಮಾಹೆಯಲ್ಲಿ ವಿತರಿಸಲಾಗುವುದು. ಮಾರ್ಚ್ 1 ರಿಂದ ಮಾರ್ಚ್ 31 ರ ವರಗೆ ಬೆಳಿಗ್ಗೆ 7 ರಿಂದ ರಾ‍ತ್ರಿ 8 ಗಂಟೆಯವರೆಗೆ ಬಾಕಿ ಉಳಿದಿರುವ ಪಡಿತರ ಚೀಟಿಯಲ್ಲಿನ ಸದಸ್ಯರುಗಳು ಇ-ಕೆವೈಸಿ ಮಾಡುವ ಹಾಗೂ ಪಡಿತರ ವಿತರಣೆ ಕಾರ್ಯ ಜರುಗಲಿದ್ದು, ಪಡಿತರ ಚೀಟಿದಾರರು ಬಯೋ ನೀಡಿದ ತಕ್ಷಣವೇ ಪಡಿತರ ಪಡೆಯಬೇಕು.

ಇ-ಕೆವೈಸಿ ಮಾಡಿಸಲು ಪಡಿತರ ಚೀಟಿದಾರರು ಯಾವುದೇ ಶುಲ್ಕ ನೀಡುವಂತಿಲ್ಲ. ಪಡಿತರ ಚೀಟಿದಾರರು ತಮಗೆ ಹಂಚಿಕೆ ಮಾಡಿದ ಆಹಾರಧಾನ್ಯವನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಅಂತಹವರ ಪಡಿತರ ಚೀಟಿಯನ್ನು ರದ್ದುಪಡಿಸಿ ಕ್ರಮಕೈಗೊಳ್ಳಲಾಗುವುದು. ಅನಧಿಕೃತವಾಗಿ ಕಾಳಸಂತೆಯಲ್ಲಿ ಆಹಾರಧಾನ್ಯವನ್ನು ದಾಸ್ತಾನು/ಸಾಗಾಣಿಕೆ ಮಾಡುವವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ-1955 ರಡಿ ಕ್ರಮ ಕೈಗೊಳ್ಳಲಾಗುವುದು. ಪಡಿತರ ವಿತರಣೆ ಕುರಿತು ಏನಾದರೂ ದೂರುಗಳು ಇದ್ದಲ್ಲಿ ಸಹಾಯವಾಣಿ ಸಂಖ್ಯೆ 1967 ಕ್ಕೆ ಕರೆ ಮಾಡಿ ದೂರು ಸಲ್ಲಿಸಬಹುದು ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಜಗದೀಶ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ