LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Politics News

ಡಿಸಿಎಂ,ಸತೀಶ್ ಜಾರಕಿಹೊಳಿ ನಡುವಿನ ಅಸಮಧಾನ ಸಿಎಲ್ ಪಿ ಸಭೆಯಲ್ಲಿ ಸ್ಪೋಟ

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹಾಗೂ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ನಡುವೆ ಮಡುಗಟ್ಟಿದ ಅಸಮಾಧಾನ ಕಾಂಗ್ರೆಸ್‌‍ ಶಾಸಕಾಂಗ ಸಭೆಯಲ್ಲಿ ಸ್ಫೋಟಗೊಂಡಿದೆ. ಬಹಳ ದಿನದಿಂದ ಅಸಮಾಧಾನ ಹೊಂದಿದ್ದ ಇಬ್ಬರೂ ನಾಯಕರು ಪರಸ್ಪರ ಅಸಮಾಧಾನ ವ್ಯಕ್ತಪಡಿಸಿಕೊಂಡಿದ್ದಾರೆ. ರಾಜ್ಯ ಕಾಂಗ್ರೆಸ್‌‍ನಲ್ಲಿ ಯಾವುದೂ ಸರಿ ಇಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರೊಂದಿಗೆ ಬಣ ರಾಜಕೀಯಗಳು ಮೊದಲಿನಿಂದಲೂ ಹೊಗೆಯಾಡುತ್ತಲೇ ಇವೆ. ಇಬ್ಬರೂ ತಮ್ಮ  ಹಿಂಬಾಲಕರು ಅಥವಾ ಬೆಂಬಲಿಗರನ್ನು ಪರಸ್ಪರ ಹೊಗಳುವುದು, ಮುನ್ನೆಲೆಗೆ ತರಲು ಪ್ರಯತ್ನಿಸುವುದು ನಡೆದೇ ಇದೆ. ಶಾಸಕಾಂಗ ಸಭೆಯಲ್ಲೂ ಇದೇ ರೀತಿಯ ಬೆಳವಣಿಗೆಗಳಾಗಿದ್ದು, ಅದಕ್ಕೆ ಸತೀಶ್‌ ಜಾರಕಿಹೊಳಿ ತತ್‌ಕ್ಷಣವೇ ಪ್ರತಿಕ್ರಿಯಿಸಿದ್ದರಿಂದಾಗಿ ಗೊಂದಲ ಉಂಟಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಪಕ್ಷದ ಶಾಸಕರು, ಸಚಿವರು ಅದರಲ್ಲೂ ಜಿಲ್ಲಾ ಉಸ್ತುವಾರಿ ಸಚಿವರು ಕಾಂಗ್ರೆಸ್‌‍ ಸಂಘಟನೆಗೆ ಹೆಚ್ಚಿನ ಒತ್ತು ನೀಡಬೇಕು. ಪಕ್ಷದ ಕಚೇರಿಗಳ ಕಟ್ಟಡ ನರ‍್ಮಾಣಕ್ಕೆ ಹೆಚ್ಚಿನ ಆಸಕ್ತಿ ವಹಿಸಬೇಕು ಎಂದು ವಿಷಯ ಪ್ರಸ್ತಾಪಿಸಿದರು.

ಈ ಹಂತದಲ್ಲಿ ಬೆಳಗಾವಿ ಜಿಲ್ಲೆಯಲ್ಲಿನ ಪಕ್ಷದ ಕಚೇರಿ ನರ‍್ಮಾಣ ಉದಾಹರಣೆಯನ್ನಾಗಿ ನೀಡಿ ಲಕ್ಷ್ಮೀಹೆಬ್ಬಾಳ್ಕರ್‌ ಅವರು ಸಚಿವರಾದ ಬಳಿಕ ಕಟ್ಟಡ ನರ‍್ಮಾಣ ಚುರುಕಾಗಿ ಮುಗಿದಿದೆ ಎಂದು ಮೆಚ್ಚುಗೆಯ ಮಾತುಗಳನ್ನಾಡಿದರು. ಇದರಿಂದ ಕಿಡಿಕಿಡಿಯಾದ ಸತೀಶ್‌ ಜಾರಕಿಹೊಳಿಯವರು ತಪ್ಪು ಮಾಹಿತಿ ನೀಡಲಾಗುತ್ತಿದೆ ಎಂದರು. ಬೆಳಗಾವಿಯಲ್ಲಿ ಜಿಲ್ಲಾ ಕಾಂಗ್ರೆಸ್‌‍ ಕಚೇರಿಗೆ ನಿವೇಶನ ಒದಗಿಸಿದ್ದು, ಈ ಹಿಂದೆ ಕಾಂಗ್ರೆಸ್‌ ನಲ್ಲಿ‍ ಸಚಿವರಾಗಿದ್ದ ರಮೇಶ್‌ ಜಾರಕಿಹೊಳಿ, ಕಟ್ಟಡ ನರ‍್ಮಾಣಕ್ಕೆ ತಾವು 3 ಕೋಟಿ ರೂ. ಸ್ವಂತ ಹಣವನ್ನು ರ‍್ಚು ಮಾಡಿರುವುದಾಗಿ ಹೇಳಿದರು. ಕೆಪಿಸಿಸಿ ಅಧ್ಯಕ್ಷರು ವಾಸ್ತವಾಂಶವನ್ನು ಮರೆಮಾಚಿ ತಪ್ಪು ಮಾಹಿತಿ ನೀಡಿದರೆ ಅದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಆಕ್ಷೇಪಿಸಿದರು.

 

ಈ ವೇಳೆ ಸಚಿವೆ ಲಕ್ಷ್ಮೀಹೆಬ್ಬಾಳ್ಕರ್‌ ಮಧ್ಯಪ್ರವೇಶಿಸಿ ತಾವು ಸಚಿವರಾದ ಬಳಿಕ ಕಟ್ಟಡ ನರ‍್ಮಾಣಕ್ಕೆ ಸಂಬಂಧಪಟ್ಟಂತೆ ಬಾಕಿ ಇದ್ದ ಹಣಕಾಸು ಸೌಲಭ್ಯ ಒದಗಿಸಿದ್ದು, ವಿದ್ಯುತ್‌ ಬಿಲ್‌, ನೀರಿನ ಬಿಲ್‌ ಎಲ್ಲಾ ಸೇರಿ ಸರಿಸುಮಾರು 7 ಕೋಟಿ ರೂ.ಗಳಷ್ಟು ಸಂಪನೂಲವನ್ನು ದಾನಿಗಳ ಸಹಕಾರದಿಂದ ಒದಗಿಸಿದ್ದೇನೆ ಎಂದು ಹೇಳಿದ್ದಾರೆ.ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿರುವುದನ್ನು ಗಮನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಲ್ಲರೂ ಒಟ್ಟಾಗಿ ಕೆಲಸ ಮಾಡಿದ್ದರಿಂದ ಕಟ್ಟಡ ಪರ‍್ಣಗೊಂಡಿದೆ. ಕಚೇರಿ ಸಿಕ್ಕಿದೆ. ಇದು ಸಂತೋಷದ ವಿಚಾರ. ಹೆಚ್ಚಿನ ರ‍್ಚೆ ಬೇಡ ಎಂದು ಸಲಹೆ ನೀಡಿದ್ದಲ್ಲದೆ, ಇತರ ಜಿಲ್ಲೆಗಳಲ್ಲೂ ಇದೇ ರೀತಿ ಕಾಂಗ್ರೆಸ್‌‍ ಕಚೇರಿ ನಿರ‍್ಮಾಣಕ್ಕೆ ಸಹಕಾರ ನೀಡಬೇಕೆಂದು ಸೂಚನೆ ನೀಡಿದ್ದಾರೆ.

ಬೆಳಗಾವಿ ಜಿಲ್ಲಾ ರಾಜಕಾರಣ ಕಾಂಗ್ರೆಸ್‌‍ನಲ್ಲಿ ಸದಾಕಾಲ ವಿವಾದ ಕೇಂದ್ರಬಿಂದುವಾಗಿಯೇ ಉಳಿದಿದೆ. ಈ ಹಿಂದೆ ಕುಮಾರಸ್ವಾಮಿ ಅವರ ನೇತೃತ್ವದ ಜೆಡಿಎಸ್‌‍-ಕಾಂಗ್ರೆಸ್‌‍ ಸಮಿಶ್ರ ಸರ‍್ಕಾರವನ್ನು ಪತನಗೊಳಿಸಲು ಬೆಳಗಾವಿ ಜಿಲ್ಲಾ ರಾಜಕಾರಣವೇ ಮೂಲವಾಗಿತ್ತು.ಬೆಳಗಾವಿಯಲ್ಲಿ ಲಕ್ಷ್ಮೀಹೆಬ್ಬಾಳ್ಕರ್‌ ಸಚಿವರಾದ ಬಳಿಕವಂತೂ ಜಾರಕಿಹೊಳಿ ಸಹೋದರರು ಒಳಗೊಳಗೇ ಒಗ್ಗಟ್ಟಾಗಿ ಹಲ್ಲು ಮಸೆಯುತ್ತಿರುವುದು ಸಾಮಾನ್ಯವಾಗಿದೆ. ಲಕ್ಷ್ಮೀಹೆಬ್ಬಾಳ್ಕರ್‌ ಜಿಲ್ಲೆಯಲ್ಲಿ ಪಕ್ಷಾತೀತವಾಗಿ ನಾಯಕರ ಬೆಂಬಲ ಪಡೆದು ಜಾರಕಿ ಹೊಳಿ ಸಹೋದರರಿಗೆ ಸೆಡ್ಡು ಹೊಡೆಯಲು ಯತ್ನಿಸುತ್ತಿದ್ದಾರೆ.ಈ ಜಿದ್ದಾಜಿದ್ದಿ ಹಲವಾರು ರ‍್ಷಗಳಿಂದಲೂ ನಡೆಯುತ್ತಲೇ ಇದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಸಚಿವೆ ಲಕ್ಷ್ಮೀಹೆಬ್ಬಾಳ್ಕರ್‌ ಅವರಿಗೆ ಬೆಂಬಲ ನೀಡುತ್ತಿದ್ದಾರೆ ಎಂಬ ಅಸಹನೆ ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಅಸಮಾಧಾನ ಮಡುಗಟ್ಟಿದೆ.

ಸತೀಶ್‌ ಜಾರಕಿಹೊಳಿಯವರಂತೂ ಸದಾಕಾಲ ಪಕ್ಷ ಎಂದ ಮೇಲೆ ಅಸಮಾಧಾನ ಸಹಜ, ಎಲ್ಲರೂ ಒಟ್ಟಾಗಿದ್ದೇವೆ ಎಂದು ಹೇಳುವುದು ಸಿನಿ ಕಥನ ಎಂದು ಹೇಳುತ್ತಲೇ ಕಾಂಗ್ರೆಸ್‌‍ನಲ್ಲಿರುವ ಗುಂಪುಗಾರಿಕೆಯನ್ನು ಹೊರಹಾಕುತ್ತಿದ್ದಾರೆ.ಇದು ನಿನ್ನೆ ಶಾಸಕಾಂಗ ಸಭೆಯಲ್ಲೂ ಪ್ರಸ್ತಾಪಗೊಂಡಿರುವುದು ಹೊಸ ಬೆಳವಣಿಗೆಯಾಗಿದೆ.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ