LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
State News

ಜೂ.26 ರಂದು ದಸರಾ ಉನ್ನತ ಮಟ್ಟದ ಸಭೆ: ಅದ್ದೂರಿ ದಸರಾ ಆಚರಣೆ ನಿರೀಕ್ಷೆ

ಜೂ.26 ರಂದು ದಸರಾ ಉನ್ನತ ಮಟ್ಟದ ಸಭೆ: ಅದ್ದೂರಿ ದಸರಾ ಆಚರಣೆ ನಿರೀಕ್ಷೆ

ಬೆಂಗಳೂರು,ಜೂ,20: ಐತಿಹಾಸಿಕ ದಸರಾ ಮಹೋತ್ಸವ ಆಚರಣೆ ಸಂಬಂಧ ಮುಖ್ಯಮಂತ್ರಿಗಳ ಅಧ್ಯಕ್ಷತೆಯ ದಸರಾ ಉನ್ನತ ಮಟ್ಟದ ಸಮಿತಿ ಸಭೆ ಜೂನ್ 26 ರ ಗುರುವಾರ ನಡೆಯಲಿದೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಗುರುವಾರ ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ಉನ್ನತ ಮಟ್ಟದ ಸಮಿತಿ ಸಭೆ,ಅದ್ಧೂರಿ ದಸರಾ ಆಚರಣೆ ಸಾಧ್ಯತೆಯಿದೆ.

ರಾಜ್ಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು ನಲವತ್ತೈದು ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿ ಕೆ.ಆರ್.ಎಸ್.ಆಣೆಕಟ್ಟು ಜೂನ್ ತಿಂಗಳಲ್ಲೇ ಭರ್ತಿಯಾಗುವ ಲಕ್ಷಣ ಕಂಡು ಬಂದಿರುವುದು ಸರ್ಕಾರದ ಉತ್ಸಾಹಕ್ಕೆ ಕಾರಣವಾಗಿದೆ.

ಈ ಬಾರಿ ಉತ್ತಮ ಮಳೆಯಾಗುತ್ತಿದ್ದು,ಜುಲೈ,ಆಗಸ್ಟ್ ತಿಂಗಳಲ್ಲಿ ಇದು ಮುಂದುವರಿಯಲಿರುವುದರಿಂದ ರಾಜ್ಯದಲ್ಲಿ ಈ ವರ್ಷ ವಿದ್ಯುತ್ ಕೊರತೆ ಕಾಣಿಸಿಕೊಳ್ಳುವ ಲಕ್ಷಣಗಳಿಲ್ಲ.

ಇದೇ ರೀತಿ ತಮಿಳುನಾಡಿಗೆ ನಿಗದಿತ ಪ್ರಮಾಣದ ನೀರು ಹರಿದು ಹೋಗುವ ವಿಶ್ವಾಸವೂ ಇದ್ದು ಒಟ್ಟಾರೆಯಾಗಿ ಉತ್ತಮ ಮಳೆಯಿಂದಾಗಿ ಬಹುತೇಕ ಸಮಸ್ಯೆಗಳುನಿವಾರಣೆಯಾಗಿವೆ.

ಹೀಗಾಗಿ ಈ ಬಾರಿ ದಸರೆಯನ್ನು ಅದ್ಧೂರಿಯಾಗಿ ಆಚರಿಸುವ ಚಿಂತನೆ ಸರ್ಕಾರದ ಪ್ರಮುಖರಲ್ಲಿದ್ದು ಜೂನ್ ಇಪ್ಪತ್ತಾರರ ಗುರುವಾರ ನಡೆಯುವ ಉನ್ನತ ಮಟ್ಟದ ಸಭೆಯಲ್ಲಿ ಅದು ವ್ಯಕ್ತವಾಗಲಿದೆ ಎಂದು ಹೇಳಲಾಗಿದೆ.

ಈ ಮಧ್ಯೆ ದಸರೆಯ ಉದ್ಘಾಟನೆಗೆ ಯಾರನ್ನು ಕರೆಸಬೇಕು ಎಂಬ ವಿಷಯದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳಿಗೆ ಅಧಿಕಾರ ನೀಡುವುದು ಬಹುತೇಕ ಖಚಿತವಾಗಿದೆ.

ಈ ಮಧ್ಯೆ ದಸರೆಯಲ್ಲಿ ಸ್ಥಳೀಯ ಕಲಾವಿದರಿಗೆ ಆದ್ಯತೆ ನೀಡಬೇಕು ಎಂಬುದೂ ಸೇರಿದಂತೆ ಹಲವು ವಿಷಯಗಳ ಬಗ್ಗೆ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಪ್ರಸ್ತಾಪವಾಗಲಿದ್ದು,ಉತ್ಸವ ಆಚರಣೆಗೆ ಈ ಬಾರಿ ಹಿಂದೆಂದಿಗಿಂತ ಹೆಚ್ಚಿನ ಅನುದಾನ ಬಿಡುಗಡೆ ಮಾಡುವ ಸಾಧ್ಯತೆಗಳಿವೆ.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ