LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
State News

ಎಸ್‌ಸಿ/ಎಸ್‌ಟಿ ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್

ಬೆಂಗಳೂರು: ರಾಜ್ಯದ ವಿವಿಧ ಸರ್ಕಾರಿ ಇಲಾಖೆ ಹಾಗೂ ವಿಶ್ವವಿದ್ಯಾಲಯಗಳಲ್ಲಿ ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡ (ಎಸ್‌ಟಿ) ಅಭ್ಯರ್ಥಿಗಳಿಗೆ ಮೀಸಲಾಗಿರುವ ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಶೀಘ್ರವೇ ಕ್ರಮ ಕೈಗೊಳ್ಳಲಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಘೋಷಿಸಿದ್ದಾರೆ.

ದಲಿತ ಸಂಘಟನೆಗಳ ನಿಯೋಗದೊಂದಿಗೆ ಮಹತ್ವದ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ರಾಜ್ಯ ಸರ್ಕಾರ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 72 ಸಾವಿರ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಿದೆ. ಮೀಸಲಾತಿ ನಿಯಮದಂತೆ ಎಸ್‌ಸಿ ಮತ್ತು ಎಸ್‌ಟಿ ಅಭ್ಯರ್ಥಿಗಳಿಗೆ ನ್ಯಾಯಯುತ ಅವಕಾಶ ಕಲ್ಪಿಸಲಾಗುವುದು. ವರ್ಷಗಳಿಂದ ಖಾಲಿ ಉಳಿದಿರುವ ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿಯೂ ನಮ್ಮ ಆದ್ಯತೆ" ಎಂದು ಸ್ಪಷ್ಟಪಡಿಸಿದರು.

ಪಿಟಿಸಿಎಲ್ ಕಾಯ್ದೆಗೂ ಶೀಘ್ರ ನಿರ್ಧಾರ

ಪಿಟಿಸಿಎಲ್ (PTCL) ಕಾಯ್ದೆ ತಿದ್ದುಪಡಿ ವಿಚಾರವಾಗಿ ಮಾತನಾಡಿದ ಪರಮೇಶ್ವರ್, ದಲಿತರಿಗೆ ಮಂಜೂರಾದ ಭೂಮಿಯ ವರ್ಗಾವಣೆಗೆ ಸಂಬಂಧಿಸಿದಂತೆ ಡಿ(ಆ) ಕಲಂ ತೆಗೆದುಹಾಕಲಾಗಿದ್ದರೂ ಅದರ ಅನುಷ್ಠಾನ ವಿಳಂಬವಾಗಿರುವ ಬಗ್ಗೆ ಆತಂಕ ವ್ಯಕ್ತವಾಗಿದೆ. ಈ ಕುರಿತು ಸರ್ಕಾರ ಶೀಘ್ರದಲ್ಲೇ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ಭರವಸೆ ನೀಡಿದರು.

ದಲಿತರಿಗೆ ಗ್ಯಾರಂಟಿ ಯೋಜನೆ ತಲುಪದಿದ್ದರೆ ಕ್ರಮ

ರಾಜ್ಯದ ಐದು ಗ್ಯಾರಂಟಿ ಯೋಜನೆಗಳ ಪ್ರಯೋಜನ ಇನ್ನೂ ಕೆಲವು ದಲಿತ ಕುಟುಂಬಗಳಿಗೆ ತಲುಪಿಲ್ಲ ಎಂಬ ದೂರುಗಳ ಕುರಿತು ಪ್ರತಿಕ್ರಿಯಿಸಿದ ಅವರು, ಸೌಲಭ್ಯದಿಂದ ವಂಚಿತರಾದ ಕುಟುಂಬಗಳನ್ನು ಗುರುತಿಸಿ ಅವರಿಗೆ ಯೋಜನೆಗಳ ಲಾಭ ತಲುಪಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದರು.

ವಿದ್ಯಾರ್ಥಿವೇತನ ಹೆಚ್ಚಳಕ್ಕೆ ಚಿಂತನೆ

ಪ್ರಸ್ತುತ ಸ್ನಾತಕೋತ್ತರ (ಪೋಸ್ಟ್-ಮೆಟ್ರಿಕ್) ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ₹1,800 ವಿದ್ಯಾರ್ಥಿವೇತನವನ್ನು ₹3,000ಕ್ಕೆ ಹೆಚ್ಚಿಸುವ ಬೇಡಿಕೆಯನ್ನು ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿ ಮುಂದಿನ ಬಜೆಟ್‌ನಲ್ಲಿ ಪರಿಗಣಿಸಲಾಗುವುದು ಎಂದು ಪರಮೇಶ್ವರ್ ಹೇಳಿದರು.

ವಿದೇಶಿ ಶಿಕ್ಷಣಕ್ಕೂ ಸರ್ಕಾರದ ಬೆಂಬಲ

ವಿದೇಶದಲ್ಲಿ ಉನ್ನತ ಶಿಕ್ಷಣ ಪಡೆಯುತ್ತಿರುವ ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳ ಶೈಕ್ಷಣಿಕ ಶುಲ್ಕವನ್ನು ಸರ್ಕಾರವೇ ಭರಿಸುವ ಯೋಜನೆ ಮುಂದುವರಿಯಲಿದೆ ಎಂದು ಅವರು ತಿಳಿಸಿದರು.

ವಿಶ್ವಕಪ್ ವಿಜೇತೆ ನೀಲವ್ವಗೆ ನಿವೇಶನ

ವಿಶೇಷಚೇತನರ ವಿಶ್ವಕಪ್ ಕ್ರಿಕೆಟ್‌ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದ ನೀಲವ್ವ ನಿಂಗವ್ವ ಹರಿಜನ್ ಅವರ ವಾಸದ ಸಮಸ್ಯೆ ಕುರಿತು ಪ್ರತಿಕ್ರಿಯಿಸಿದ ಡಿಸಿಎಂ, ಕಳೆದ ವರ್ಷ ₹5 ಲಕ್ಷ ನೆರವು ನೀಡಲಾಗಿದ್ದು, ಶೀಘ್ರದಲ್ಲೇ ಅವರಿಗೆ ವಸತಿ ನಿವೇಶನವನ್ನೂ ಹಂಚಿಕೆ ಮಾಡಲಾಗುವುದು ಎಂದು ಘೋಷಿಸಿದರು.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ