LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Local News | State News

ಅರ್ಧದಷ್ಟು ಭರ್ತಿಯಾದ ತುಂಗಭದ್ರಾ ಜಲಾಶಯ! 1 ಲಕ್ಷ ಕ್ಯುಸೆಕ್‌ಗೂ ಅಧಿಕ ಒಳಹರಿವು

ರೈತರಿಗೆ ಶೀಘ್ರದಲ್ಲೇ ಕಾಲುವೆ ನೀರಿನ ಸಿಹಿಸುದ್ದಿ?

ಹೊಸಪೇಟೆ : ಮಲೆನಾಡು ಭಾಗದಲ್ಲಿ ಸುರಿದ ಮಳೆಯ ಪರಿಣಾಮ ವಿಜಯನಗರ ಜಿಲ್ಲೆ ಹೊಸಪೇಟೆ ಸಮೀಪದ ತುಂಗಭದ್ರಾ ಜಲಾಶಯಕ್ಕೆ ಹರಿದುಬರುತ್ತಿರುವ ನೀರಿನ ಪ್ರಮಾಣ ಮಂಗಳವಾರ 1 ಲಕ್ಷ ಕ್ಯುಸೆಕ್‌ಗಿಂತ ಅಧಿಕ ದಾಖಲಾಗಿದ್ದು, ಜಲಾಶಯ ಇದೀಗ ಅರ್ಧದಷ್ಟು ಭರ್ತಿಯಾಗಿದೆ. ಇದೇ ಪ್ರಮಾಣದ ಒಳಹರಿವು ಇನ್ನೂ ನಾಲ್ಕೈದು ದಿನಗಳ ಕಾಲ ಮುಂದುವರಿದರೆ, ಜಲಾಶಯದ ನೀರಿನ ಸಂಗ್ರಹ 80 ಟಿಎಂಸಿ ಅಡಿಗೂ ಹೆಚ್ಚು ತಲುಪುವ ಸಾಧ್ಯತೆ ಇದೆ.

news_1785913662_0_819.webp

 

ಗರಿಷ್ಠ 105.788 ಟಿಎಂಸಿ ಅಡಿ ಸಂಗ್ರಹ ಸಾಮರ್ಥ್ಯ ಹೊಂದಿರುವ ತುಂಗಭದ್ರಾ ಜಲಾಶಯದಲ್ಲಿ ಪ್ರಸ್ತುತ 53.64 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ. ಈ ಬೆಳವಣಿಗೆ ಮೂರೂ ರಾಜ್ಯಗಳ 8 ಜಿಲ್ಲೆಗಳ ಸುಮಾರು 13 ಲಕ್ಷ ಎಕರೆ ಕೃಷಿಭೂಮಿಗೆ ಆಶಾಕಿರಣ ಮೂಡಿಸಿದ್ದು, ಮೊದಲ ಬೆಳೆಗೆ ಅಗತ್ಯವಿರುವ 90 ಟಿಎಂಸಿ ಅಡಿ ನೀರಿನ ಲಭ್ಯತೆ ಬಗ್ಗೆ ರೈತರಲ್ಲಿ ನಿರೀಕ್ಷೆ ಹೆಚ್ಚಿಸಿದೆ.

ಶೀಘ್ರವೇ ಕಾಲುವೆಗಳಿಗೆ ನೀರು?

ಜಲಾಶಯಕ್ಕೆ ಒಳಹರಿವು ನಿರಂತರವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ನೀರಾವರಿ ಸಲಹಾ ಸಮಿತಿ ಸಭೆಯನ್ನು ಶೀಘ್ರದಲ್ಲೇ ಕರೆಯುವ ಸಾಧ್ಯತೆ ಇದೆ. ಸಭೆಯಲ್ಲಿ ಕಾಲುವೆಗಳಿಗೆ ನೀರು ಹರಿಸುವ ದಿನಾಂಕ ಹಾಗೂ ಪ್ರಮಾಣದ ಬಗ್ಗೆ ಮಹತ್ವದ ತೀರ್ಮಾನ ಕೈಗೊಳ್ಳುವ ನಿರೀಕ್ಷೆ ಇದೆ.

ಮೂಲಗಳ ಪ್ರಕಾರ, ಜಲಾಶಯದಲ್ಲಿ ಕನಿಷ್ಠ 70 ಟಿಎಂಸಿ ಅಡಿ ನೀರು ಸಂಗ್ರಹವಾಗಿದ್ದು, ಒಳಹರಿವು 20 ಸಾವಿರ ಕ್ಯುಸೆಕ್‌ಗಿಂತ ಹೆಚ್ಚಿದ್ದರೆ ಮಾತ್ರ ಮೊದಲ ಬೆಳೆಗೆ ಕಾಲುವೆಗಳಿಗೆ ನೀರು ಬಿಡುವ ನಿರ್ಧಾರಕ್ಕೆ ಬರಬಹುದು. ಇಲ್ಲವಾದರೆ ನೀರು ಹರಿಸುವ ಪ್ರಕ್ರಿಯೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ.

ಮಳೆ ವಿಳಂಬದ ಪರಿಣಾಮ

ಸಾಮಾನ್ಯವಾಗಿ ಉತ್ತಮ ಮಳೆಯ ವರ್ಷಗಳಲ್ಲಿ ಜೂನ್ ಅಂತ್ಯದ ವೇಳೆಗೆ ಜಲಾಶಯ ಭರ್ತಿಯಾಗಿ, ಜುಲೈ ಮೊದಲ ವಾರದಲ್ಲೇ ಕಾಲುವೆಗಳಿಗೆ ನೀರು ಹರಿಸಲಾಗುತ್ತಿತ್ತು. ಆದರೆ ಈ ಬಾರಿ ಮುಂಗಾರು ವಿಳಂಬವಾದ ಕಾರಣ, ನೀರಾವರಿ ಆರಂಭವೂ ಸುಮಾರು ಒಂದೂವರೆ ತಿಂಗಳು ತಡವಾಗುವ ಲಕ್ಷಣಗಳು ಕಾಣಿಸುತ್ತಿವೆ.

ಒಳಹರಿವು ಕುಸಿಯುವ ಆತಂಕವೂ ಇದೆ

ಇನ್ನೊಂದೆಡೆ, ಮಲೆನಾಡು ಭಾಗದಲ್ಲಿ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾಗುತ್ತಿರುವ ಸೂಚನೆಗಳು ಕಂಡುಬಂದಿವೆ. ವಿಜಯನಗರ ಜಿಲ್ಲೆಯ ಮರಿಯಮ್ಮನಹಳ್ಳಿ ಭಾಗದಲ್ಲಿ ಮಾತ್ರ ಸಾಧಾರಣ ಮಳೆ ದಾಖಲಾಗಿದ್ದು, ಉಳಿದ ಪ್ರದೇಶಗಳಲ್ಲಿ ಮಳೆಯ ಕೊರತೆ ಕಂಡುಬಂದಿದೆ. ಇದೇ ಪರಿಸ್ಥಿತಿ ಮುಂದುವರಿದರೆ, ಮುಂದಿನ ದಿನಗಳಲ್ಲಿ ತುಂಗಭದ್ರಾ ಜಲಾಶಯಕ್ಕೆ ಹರಿದುಬರುವ ನೀರಿನ ಪ್ರಮಾಣವೂ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರೈತರು ಈಗ ಜಲಾಶಯದ ಒಳಹರಿವು ಮತ್ತು ನೀರಾವರಿ ಸಲಹಾ ಸಮಿತಿಯ ಸಭೆಯತ್ತ ಕಾತರದಿಂದ ಕಾದು ನೋಡುತ್ತಿದ್ದಾರೆ.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅರ್ಧದಷ್ಟು ಭರ್ತಿಯಾದ ತುಂಗಭದ್ರಾ ಜಲಾಶಯ! 1 ಲಕ್ಷ ಕ್ಯುಸೆಕ್‌ಗೂ ಅಧಿಕ ಒಳಹರಿವುತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದು