ಬಳ್ಳಾರಿ : ಮದುವೆಯ ಸಂಭ್ರಮ, ಬಂಧು-ಬಳಗದ ಶುಭಾಶಯಗಳು, ಹೊಸ ಬದುಕಿನ ಕನಸು... ಇವೆಲ್ಲವೂ ಕೆಲವೇ ಗಂಟೆಗಳಲ್ಲಿ ರಕ್ತದ ಮಡುವಿನಲ್ಲಿ ಅಂತ್ಯಗೊAಡಿರುವ ಹೃದಯವಿದ್ರಾವಕ ಘಟನೆ ಬಳ್ಳಾರಿ ನಗರವನ್ನು ಬೆಚ್ಚಿಬೀಳಿಸಿದೆ. ಪ್ರೀತಿಸಿ ಮದುವೆಯಾಗಿದ್ದ ನವವಿವಾಹಿತ ನಬಿ ರಸೂಲ್ ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಗರದ ಬಟ್ಟಿ ಏರಿಯಾದಲ್ಲಿ ನಡೆದಿದೆ.
ಮದುವೆಯ ರಿಸೆಪ್ಷನ್ ಮುಗಿದು ಕೆಲವೇ ಹೊತ್ತಿನಲ್ಲಿ ಸ್ನೇಹಿತ ಕರೆ ಮಾಡಿದ್ದಾರೆ ಎಂದು ಹೇಳಿ ರಾತ್ರಿ ಸುಮಾರು 11.30 ಗಂಟೆಗೆ ಮನೆಯಿಂದ ಹೊರಟಿದ್ದ ರಸೂಲ್, ಮತ್ತೆ ಜೀವಂತವಾಗಿ ಮನೆಗೆ ಮರಳಲೇ ಇಲ್ಲ. ರಾತ್ರಿ ತಡವಾದರೂ ಮನೆಗೆ ಬಾರದ ಹಿನ್ನೆಲೆಯಲ್ಲಿ ಆತಂಕಗೊAಡ ಕುಟುಂಬಸ್ಥರು ಹುಡುಕಾಟ ಆರಂಭಿಸಿದರು. ಕೊನೆಗೆ ಮನೆಯಿಂದ ಸುಮಾರು 700 ಮೀಟರ್ ದೂರದಲ್ಲಿ ರಸೂಲ್ ಅವರ ಶವ ಪತ್ತೆಯಾಗಿದ್ದು, ಮದುವೆ ಮನೆಯನ್ನು ಕ್ಷಣಾರ್ಧದಲ್ಲೇ ಶೋಕ ಸಾಗರವಾಗಿಸಿದೆ.
ಮೃತ ನಬಿ ರಸೂಲ್ ವಿಚ್ಛೇದಿತ ಮಹಿಳೆಯೊಬ್ಬರನ್ನು ಪ್ರೀತಿಸುತ್ತಿದ್ದರು. ಸುಮಾರು 15 ದಿನಗಳ ಹಿಂದೆ ಇಬ್ಬರೂ ಮನೆಯಿಂದ ಹೊರಟಿದ್ದರು. ಬಳಿಕ ಮನೆಗೆ ಮರಳಿದಾಗ ರಸೂಲ್ ಕುಟುಂಬಸ್ಥರು ಅವರ ಪ್ರೀತಿಯನ್ನು ಒಪ್ಪಿ ಮದುವೆ ನೆರವೇರಿಸಿದ್ದರು. ಆದರೆ ಮಹಿಳೆಯ ಕುಟುಂಬ ಈ ಸಂಬAಧಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಲ್ಲದೆ, ರಸೂಲ್ಗೆ ಈ ಹಿಂದೆಯೇ ಎಚ್ಚರಿಕೆ ನೀಡಿದ್ದರೆಂಬ ಮಾಹಿತಿ ಇದೀಗ ಬೆಳಕಿಗೆ ಬಂದಿದೆ.
ಈ ಹಿನ್ನೆಲೆ ಪ್ರೀತಿ ವಿವಾಹವೇ ಕೊಲೆಗೆ ಕಾರಣವಾಗಿರಬಹುದೇ? ಎಂಬ ಅನುಮಾನ ಬಲವಾಗಿದ್ದು, ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಆರಂಭಿಸಿದ್ದಾರೆ.
ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ. ಪನ್ನೇಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬAಧಿಸಿದAತೆ ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ವಿಶೇಷ ತಂಡ ಕಾರ್ಯಾಚರಣೆ ಆರಂಭಿಸಿದೆ.