LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
State News

ಭಾರತೀಯ ಸನಾತನ ಸಂಸ್ಕೃತಿ ವಿಶ್ವ ಶೇಷ್ಠ, ನಮ್ಮ ಧರ್ಮದಲ್ಲಿ ಮಹಿಳೆಯರಿಗೆ ವಿಶೇಷ ಮಹತ್ವ : ಸುಭುದೇಂದ್ರ ತೀರ್ಥ ಸ್ವಾಮೀಜಿ

ಭಾರತೀಯ ಸನಾತನ ಸಂಸ್ಕೃತಿ ವಿಶ್ವ ಶೇಷ್ಠ, ನಮ್ಮ ಧರ್ಮದಲ್ಲಿ ಮಹಿಳೆಯರಿಗೆ ವಿಶೇಷ ಮಹತ್ವ : ಸುಭುದೇಂದ್ರ ತೀರ್ಥ ಸ್ವಾಮೀಜಿ

ಜಯನಗರ: ರಕ್ಷಾ ಫೌಂಡೇಷನ್ 13ನೇ ವರ್ಷದ ವಾರ್ಷಿಕೋತ್ಸವದಲ್ಲಿ ಸುಮಂಗಲಿಯರಿಂದ ಶ್ರೀ ಲಲಿತಾ ಸಹಸ್ರನಾಮ ಪೂಜೆ ಕಾರ್ಯಕ್ರಮ ಮತ್ತು ಧರ್ಮಗುರುಗಳಿಂದ ಆಶೀರ್ವಚನ ಏರ್ಪಡಿಸಲಾಗಿತ್ತು.

ಚಂದ್ರಗುಪ್ತಮೌರ್ಯ(ಶಾಲಿನಿ)ಆಟದ ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಂತ್ರಾಲಯ ಮಠದ ಸುಭುದೇಂದ್ರ ತೀರ್ಥ ಸ್ವಾಮೀಜಿ, ಸುಪ್ರಿಂಕೋರ್ಟ್ ನ್ಯಾಯಧೀಶರಾದ ಅರವಿಂದ್ ಕುಮಾರ್, ಸಂಸದ ತೇಜಸ್ವಿ ಸೂರ್ಯ, ಶಾಸಕರು ರಕ್ಷಾ ಫೌಂಡೇಸನ್ ಸಂಸ್ಥಾಪಕರಾದ ಸಿ.ಕೆ.ರಾಮಮೂರ್ತಿ, ಶಾಸಕರಾದ ಸತೀಶ್ ರೆಡ್ಡಿ, ಬಿಬಿಎಂಪಿ ಮಾಜಿ ಸದಸ್ಯರಾದ ನಾಗರತ್ನರಾಮಮೂರ್ತಿ ಚಾಲನೆ ನೀಡಿದರು.

ಸುಭುದೇಂದ್ರ ತೀರ್ಥ ಸ್ವಾಮೀಜಿ ಮಾತನಾಡಿ, ಪ್ರತಿವರ್ಷ ಶ್ರೀ ಲಲಿತಾ ಸಹಸ್ರನಾಮ ಕಾರ್ಯಕ್ರಮವನ್ನು ಯಶ್ವಸಿಯಾಗಿ ಅಚರಿಸಿಕೊಂಡು ಬರುತ್ತಿದ್ದು, ಇದು ಶ್ರೇಷ್ಠವಾದ ಕಾರ್ಯ. ಶ್ರೀ ಲಲಿತಾ ತಾಯಿಯಿಂದ ಎಲ್ಲರಿಗೂ ಆಶೀರ್ವಾದ, ಕೃಪೆ ಎಲ್ಲರಿಗೂ ಸಿಗಬೇಕು. ಭಾರತೀಯ ಸನಾತನ ಸಂಸ್ಕೃತಿ ವಿಶ್ವ ಶೇಷ್ಠವಾದದ್ದು. ನಮ್ಮ ಧರ್ಮದಲ್ಲಿ ಮಹಿಳೆಯರಿಗೆ ವಿಶೇಷ ಮಾನ್ಯತೆ ನೀಡಲಾಗಿದೆ. ಸನಾತನ ಹಿಂದೂ ಪರಂಪರೆಯಲ್ಲಿ ಮಹಿಳೆಯರಿಗೆ ದೇವಸ್ಥಾನ ಪ್ರವೇಶ, ಪೂಜೆ ಮಾಡುವ ಹಕ್ಕು ನೀಡಲಾಗಿದೆ ಎಂದರು.

ವೇದಗಳಲ್ಲಿ ಶ್ರೀಲಲಿತಾ ಸಹಸ್ರನಾಮ ವಿಶೇಷತೆ, ಮಹಿಮೆ, ಉಪಾಸನೆ ಕುರಿತು ತಿಳಿಸಲಾಗಿದೆ. ಲಲಿತಾ ಎಂದರೆ ಸರಳ, ಮಕ್ಕಳಿಗೆ ತಾಯಿಯ ಅನುಗ್ರಹ, ತನ್ಮೂಲಕ ಸಮಸ್ತ ಲೋಕಕ್ಕೆ ಮಾತೃಸ್ವರೂಪಿಣಿಯಾದ ಶ್ರೀ ಲಲಿತಾದೇವಿಯ ಸಹಸ್ರನಾಮದಿಂದ ಸಕಲ ಸಂಕಷ್ಟಗಳು ನಿವಾರಣೆಯಾಗುತ್ತವೆ ಎಂದು ಹೇಳಿದರು.

ನ್ಯಾಯಧೀಶರಾದ ಅರವಿಂದ್ ಕುಮಾರ್ ಮಾತನಾಡಿ, ರಕ್ಷಾ ಫೌಂಡೇಷನ್ ಶಿಸ್ತುಬದ್ದ ಸಂಘಟನೆಯ ಮೂಲಕ ಸಮಾಜ ಸೇವೆ ಮಾಡುತ್ತಿದೆ. ಲಲಿತಾ ಸಹಸ್ರನಾಮ ಲಲಿತಾಂಬೆ ಪೂಜೆ ಮಾಡುವುದರಿಂದ ಸಂಕಷ್ಟಗಳು ನಿವಾರಣೆ ಯಾಗುತ್ತದೆ ಎಂದು ಪುರಾಣದಲ್ಲಿ ಉಲ್ಲೇಖವಿದೆ ಎಂದು ಹೇಳಿದರು.

ಶಾಸಕ ಸಿ.ಕೆ.ರಾಮಮೂರ್ತಿ ಮಾತನಾಡಿ, ರೈತ ಮತ್ತು ಸೈನಿಕ ದೇಶಕ್ಕೆ ಎರಡು ಕಣ್ಣುಗಳು ಇದ್ದಂತೆ. ದೇಶ, ರಾಜ್ಯ ಸುಭೀಕ್ಷೆಯಾಗಿರಬೇಕು ಮತ್ತು ನಾಡಿನ ಸಮಸ್ತ ಜನರು ಸುಖ, ಶಾಂತಿ ನೆಮ್ಮದ್ದಿಯಿಂದ ಬಾಳಬೇಕು ಎಂಬ ಸದಾಶಯದಿಂದ ಶ್ರೀ ಲಲಿತಾ ಸಹಸ್ರನಾಮ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ನಾಡಿನಲ್ಲಿ ಉತ್ತಮ ಮಳೆ, ಬೇಳೆಯಾಗಲಿ. ಬಂದ ಸಂಕಷ್ಟಗಳು ನಿವಾರಣೆಯಾಗಲಿ, ಎಲ್ಲರ ಬಾಳಿನಲ್ಲಿ ಬೆಳಕು ಮೂಡಲಿ ಎಂದು ಹೇಳಿದರು.

ಚಲನಚಿತ್ರ ನಟಿ ಮಾಳವಿಕ ಅವಿನಾಶ್, ತಿರುಪತಿ ದೇವಸ್ಥಾನದ ಸದಸ್ಯರಾದ ನರೇಶ್, ಮಾಜಿ ಪಾಲಿಕೆ ಸದಸ್ಯರುಗಳಾದ ಸೋಮಶೇಖರ್, ಮಾಲತಿ ಸೋಮಶೇಖರ್,ಜಲ್ಲಿ ರಮೇಶ್ ,ಧನರಾಜ್, ಗೋವಿಂದನಾಯ್ಡು, ಚಂದ್ರಶೇಖರರಾಜು, ದೀಪಿಕಾ ಮಂಜುನಾಥ್ ರೆಡ್ಡಿ, ಚನ್ನಗಿರಿಯಪ್ಪ ಮತ್ತಿತರರು ಭಾಗವಹಿಸಿದ್ದರು.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ