LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Local News

ಬಳ್ಳಾರಿಯಲ್ಲಿ ಬಸ್ ದರ ಹೆಚ್ಚಳ ಖಂಡಿಸಿ ಜೆಡಿಎಸ್ ಪ್ರತಿಭಟನೆ

ಬಳ್ಳಾರಿ: ಅವೈಜ್ಞಾನಿಕವಾಗಿ ಬಸ್ ಪ್ರಯಾಣ ದರವನ್ನು 15% ಏರಿಕೆ ಮಾಡಿರುವುದನ್ನು ಜನತಾದಳ (ಜಾತ್ಯಾತೀತ) ಪಕ್ಷವು ಖಂಡಿಸುತ್ತದೆ, ರಾಜ್ಯ ಸರ್ಕಾರ ಈ ಕೂಡಲೇ ಬಸ್ ದರ ಹೆಚ್ಚಳವನ್ನು ಹಿಂಪಡೆಯಬೇಕು ಎಂದು ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷ ಮೀನಳ್ಳಿ ತಾಯಣ್ಣ ಅವರು ಒತ್ತಾಯಿಸಿದ್ದಾರೆ...ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಬಸ್ ದರ ಹೆಚ್ಚಳ ಖಂಡಿಸಿ ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಜುಬೇರ್ ಅವರಿಗೆ ಮನವಿ ಸಲ್ಲಿಸಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು
ರಾಜ್ಯ ಸರ್ಕಾರ ಅವೈಜ್ಞಾನಿಕ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಜನಸಾಮಾನ್ಯರ ಮೇಲೆ ದರ ಹೆಚ್ಚಳದ ಹೊರೆ ಹೊರಿಸಿದೆ. ಸುಭದ್ರವಾಗಿದ್ದ ಕರ್ನಾಟಕದ ಆರ್ಥಿಕತೆಯನ್ನು ಹದಗೆಡೆಸಿರುವ ಸರ್ಕಾರ, ಸಾರಿಗೆ ಪ್ರಯಾಣ ದರವನ್ನು ಶೇ.15% ಹೆಚ್ಚಳ ಮಾಡಿ ಈಗ ಜನಸಾಮಾನ್ಯರ ಮೇಲೆ ಅನಗತ್ಯವಾಗಿ ಬೆಲೆ ಏರಿಕೆಯ ಬರೆ ಹಾಕುತ್ತಿದೆ.

ಗ್ಯಾರಂಟಿ ಯೋಜನೆಗಳಿಂದ ಸಾರಿಗೆ ಸಂಸ್ಥೆ ದಿವಾಳಿಯಾಗಿದ್ದು, ಈಗಾಗಲೇ ರಾಜ್ಯ ಪಾರಿಗೆ ಸಂಸ್ಥೆಗೆ 2,000 ಕೋಟಿ ಸಾಲ ಪಡೆಯಲು ಸಚಿವ ಸಂಪುಣಿ ಅನುಮೋದನೆ ನೀಡಿದೆ. ಮಹಿಳೆಯರಿಗೆ ಉಚಿತ ಪ್ರಯಾಣ ನೀಡಿ,ಅದರ ನಷ್ಟವನ್ನು ಸರಿದೂಗಿಸಲು ದರ ಹೆಚ್ಚಿಸಿ ಪುರುಷ ಪ್ರಯಾಣಿಕರಿಂದ ವಸೂಲಿ ಮಾಡಲಾಗುತ್ತಿದೆ. ಸರ್ಕಾರ ಒಂದು ಕೈಯಲ್ಲಿ ಕೊಟ್ಟು, ಇನ್ನೊಂದು ಕೈಯಲ್ಲಿ ಕಸಿದುಕೊಳ್ಳುತ್ತಿದೆ.ರಾಜ್ಯ ಸರ್ಕಾರದ ಈ ತೀರ್ಮಾನ ಜನವಿರೋಧಿ ಮತ್ತು ಬಡವರ ವಿರೋಧಿ ಕ್ರಮವಾಗಿದೆ. ಬಸ್ ದರ ಏರಿಕೆಯನ್ನು ಜನತಾದಳ (ಜಾತ್ಯಾತೀತ) ಪಕ್ಷವು ಖಂಡಿಸುತ್ತದೆ.ಈ ಕೂಡಲೇ ರಾಜ್ಯ ಸರ್ಕಾರ ಅವೈಜ್ಞಾನಿಕ ಬಸ್ ಪ್ರಯಾಣ ದರ ಏರಿಕೆಯನ್ನು ವಾಪಾಸ್‌ ಪಡೆಯಬೇಕೆಂದು ಬಳ್ಳಾರಿ ಜಿಲ್ಲಾ ಜನತಾದಳ (ಜಾತ್ಯಾತೀತ) ಪಕ್ಷದ ವತಿಯಿಂದ ಜಿಲ್ಲಾಧ್ಯಕ್ಷರು ಆಗ್ರಹಿಸುತ್ತಾರೆ ಎಂದರು..

ಈ ಸಂದರ್ಭದಲ್ಲಿ ಮುಖಂಡರಾದ ರಾಜು ನಾಯ್ಕ್, ಲಕ್ಷ್ಮಿ ಕಾಂತ್ ರೆಡ್ಡಿ, ಕುರೆಕುಪ್ಪ ಸೋಮಪ್ಪ, ಹೊನ್ಞುರ ಸ್ವಾಮಿ, ಮಧುರೆ ವಿಜಯ್ , ರಾಮಾಂಜನೇಯಲು, ಕಿರಣ್ ಕುಮಾರ್, ನೀಲಾ, ಜಮೀಲಾ, ಮುತ್ತು,  ಸೇರಿದಂತೆ ಮತ್ತಿತರರು ಇದ್ದರು

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯುದ್ಧ ಆರಂಭವಾಗಿದೆ, ರಣರಂಗದಲ್ಲಿ ಗೆಲುವು ನಮ್ಮದೇ : ಬಿ.ವೈ.ವಿಜಯೇಂದ್ರಭಾರತದ್ದು ಆಕ್ರಮಣದ ಇತಿಹಾಸವಲ್ಲ, ಜ್ಞಾನ ಹಂಚಿದ ಪರಂಪರೆ: ಮೋಹನ್ ಭಾಗವತ್ಮಂತ್ರಾಲಯ ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವಕ್ಕೆ ಶ್ರೀಗಳಿಂದ ಅದ್ದೂರಿ ಚಾಲನೆದಿಢೀರ್ ದೆಹಲಿಗೆ ತೆರಳಿದ ನಾಗೇಂದ್ರ; ಹೈಕಮಾಂಡ್ ಅಂಗಳದಲ್ಲಿ ರಾಜೀನಾಮೆ ಭವಿಷ್ಯ!ಹಂಪಿ ಬಳಿ ಐದು ದಶಕಗಳ ಬಳಿಕ ಹುಲಿ ಪ್ರತ್ಯಕ್ಷ!43.80 ಲಕ್ಷ ಮತದಾರರಿಗೆ ಶೀಘ್ರದಲ್ಲೇ ಚುನಾವಣಾ ಆಯೋಗದ ನೋಟಿಸ್! ಅರ್ಧದಷ್ಟು ಭರ್ತಿಯಾದ ತುಂಗಭದ್ರಾ ಜಲಾಶಯ! 1 ಲಕ್ಷ ಕ್ಯುಸೆಕ್‌ಗೂ ಅಧಿಕ ಒಳಹರಿವುತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!