LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Crime News

ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ: ತಮಿಳುನಾಡಿನಲ್ಲಿ ಮೂವರ ಬಂಧನ

ಮಂಗಳೂರು: ಉಳ್ಳಾಲದ ಕೋಟೆಕಾರು ಸಹಕಾರಿ ಬ್ಯಾಂಕ್​ನಲ್ಲಿ ದರೋಡೆ ಮಾಡಿದ  ದರೋಡೆಕಾರರಲ್ಲಿ ಮೂವರನ್ನು ತಮಿಳುನಾಡಿನಲ್ಲಿ ಮಂಗಳೂರು ಪೊಲೀಸ್ ರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಬ್ಯಾಂಕಿನ ದರೋಡೆ ನಂತರ ದರೋಡೆಕಾರರು ಕದ್ದ ಚಿನ್ನವುಳ್ಳ ಗೋಣಿ ಚೀಲದ ಸಹಿತ 700 ಕಿ.ಮೀ ಕಾರಿನಲ್ಲೇ ಪ್ರಯಾಣಿಸಿದ್ದರು ಎಂಬುದು ತನಿಖೆಯಲ್ಲಿ ತಿಳಿದುಬಂದಿದೆ. ಮಂಗಳೂರಿನಿಂದ ಫಿಯೇಟ್ ಕಾರಿನಲ್ಲಿ ಪರಾರಿಯಾಗಿದ್ದ ದರೋಡೆಕೋರರು ತಮಿಳುನಾಡಿನ ತಿರುನಲ್ವೇಲಿಗೆ ಪ್ರಯಾಣಿಸಿದ್ದರು. ತಮಿಳುನಾಡು ತಲುಪಿದ ಬಳಿಕ ಅಜ್ಞಾತ ಸ್ಥಳದಲ್ಲಿ ಕಾರು ಬಿಟ್ಟು ಚಿನ್ನದ ಜೊತೆ ಪರಾರಿಯಾಗಿದ್ದರು.

ದರೋಡೆಕೋರರ ಜಾಡು ಹಿಡಿದು ಹೊರಟಿದ್ದ ಮಂಗಳೂರು ಪೊಲೀಸರಿಗೆ ತಮಿಳುನಾಡಿನಲ್ಲಿ ಕಾರು ಪತ್ತೆಯಾಗಿದೆ. ನಂತರ ಕಾರಿನ ಚೇಸಿಸ್ ನಂಬರ್ ಆಧಾರದಲ್ಲಿ ಕಾರಿನ ನೈಜ ಮಾಲೀಕನ ಮಾಹಿತಿ ಸಂಗ್ರಹಿಸಿದ್ದಾರೆ. ಆ ಬಳಿಕ ತಮಿಳುನಾಡಿನಲ್ಲಿ ಜಾಲಾಡಿದ ಮಂಗಳೂರು ಪೊಲೀಸರಿಗೆ ಮೂವರು ಆಗಂತುಕರ ಜಾಡು ಪತ್ತೆಯಾಗಿದೆ. ತಮಿಳುನಾಡಿನ ತಿರುನಲ್ವೇಲಿ ಬಳಿ ಮೂವರು ದರೋಡೆಕೋರರನ್ನು ಬಂಧಿಸಲಾಗಿದೆ.ಪ್ರಮುಖ ಅರೋಪಿ ಮುರುಗಂಡಿ ದೇವರ್ ತಿರುನಲ್ವೇಲಿ ತನಕ ಕಾರು ಚಲಾಯಿಸಿದ್ದ. ದರೋಡೆಕೋರರು ಪರಾರಿಯಾಗಲು ಬಳಸಿದ್ದು ಮಹಾರಾಷ್ಟ್ರ ಮೂಲದ ಫಿಯೇಟ್ ಕಾರು ಎಂಬ ಮಾಹಿತಿ ಕೂಡ ಲಭ್ಯವಾಗಿದೆ. ಮುಂಬೈ ಹಾಗೂ ತಮಿಳುನಾಡು ಮೂಲದ ನಟೋರಿಯಸ್ ಗ್ಯಾಂಗ್ ದರೋಡೆ ಮಾಡಿದೆ.

ಕೋಟೆಕಾರು ಬ್ಯಾಂಕ್ ದರೋಡೆಯ ಕಿಂಗ್​ಪಿನ್ ಮುರುಗಂಡಿ ದೇವರ್ ಎರಡು ತಿಂಗಳ ಹಿಂದೆಯೇ ಮಂಗಳೂರಿಗೆ ಬಂದಿದ್ದ. ಕೋಟೆಕಾರು ಬ್ಯಾಂಕ್ ಪರಿಸರದಲ್ಲಿ ಸುತ್ತಾಡಿ ಮಾಹಿತಿ ಕಲೆ ಹಾಕಿದ್ದ. ಆ ಬಳಿಕ ನಿಖರವಾದ ಸ್ಕೆಚ್ ತಯಾರಿಸಿ ಮತ್ತೆ ತಮಿಳುನಾಡಿಗೆ ತೆರಳಿದ್ದ. ಆ ಬಳಿಕ ದರೋಡೆಗೆ ಪಕ್ಕಾ ಪ್ಲಾನ್ ಮಾಡಿಕೊಂಡು ತಂಡದ ಜೊತೆ ಬಂದಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಆರು ಮಂದಿಯ ತಂಡ ನಡೆಸಿದ ದರೋಡೆ: ದರೋಡೆ ಮಾಡುವುದಕ್ಕೆಂದು ರಾಜೇಂದ್ರನ್, ಕಣ್ಣನ್ ಮಣಿ ಹಾಗೂ ಇತರೆ ಅರು ಜನರ ಜೊತೆ ಮುರುಗಂಡಿ ದೇವರ್ ಬಂದಿದ್ದ. ಆದರೆ, ಐದು ಜನರಷ್ಟೇ ಫಿಯೇಟ್ ಕಾರಿನಲ್ಲಿ ಬಂದು ದರೋಡೆ ಮಾಡಿದ್ದರು. ಮತ್ತೋಬ್ಬ ಬೇರೆ ಜಾಗದಲ್ಲಿ ನಿಂತು ದರೋಡೆಗೆ ನೆರವು ನೀಡಿದ್ದ.ದರೋಡೆಕೋರರ ಬಂಧನದ ಬಗ್ಗೆ ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅರ‍್ವಾಲ್ ಮಾಹಿತಿ ನೀಡಿದ್ದು, ದರೋಡೆಕೋರರನ್ನು ಹೇಗೆ ಟ್ರ‍್ಯಾಕ್ ಮಾಡಿ ಬಂಧಿಸಲಾಯ್ತು ಎಂಬುದನ್ನು ವಿವರಿಸಿದ್ದಾರೆ. ಕರ್ನಾಟಕ ಗುಪ್ತಚರ ಇಲಾಖೆ ಕೂಡ ಬ್ಯಾಂಕ್ ದರೋಡೆ ಪ್ರಕರಣ ಭೇದಿಸಲು ಸಹಾಯ ಮಾಡಿತ್ತು. ಬಂಧಿತರಿಂದ ಚಿನ್ನದ ಜತೆಗೆ ತಲ್ವಾರ್ ಮತ್ತು ಪಿಸ್ತೂಲ್ ವಶಪಡಿಸಿಕೊಳ್ಳಲಾಗಿತ್ತು.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ