LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Crime News

ನಟಿ ಸೌಂದರ್ಯ ಸಾವು ಆಕಸ್ಮಿಕವಲ್ಲ, ಕೊಲೆ ಮಾಡಿದ್ದು ಮೋಹನ್ ಬಾಬು! : 21 ವರ್ಷಗಳ ಬಳಿಕ ದೂರು ದಾಖಲು!

ಬೆಂಗಳೂರು: ಟಾಲಿವುಡ್ ನಲ್ಲಿ ಹಿಂದೆ ನಂ.1 ನಟಿಯಾಗಿದ್ದ ಕರ್ನಾಟಕ ಮೂಲದ ಬಹುಭಾಷೆ ತಾರೆ ಸೌಂದರ್ಯಾ ಅವರು ಬೆಂಗಳೂರಿನ ಹೆಬ್ಬಾಳ ಬಳಿ 2004ರ ಏಪ್ರಿಲ್ 17ರಂದು ನಿಧನ ಹೊಂದಿದರು. ಆಗ ಅವರು ಏರಿದ್ದ ಖಾಸಗಿ ವಿಮಾನ ಟೇಕಾಫ್ ಆದ ಕೆಲವೇ ಗಂಟೆಗಳಲ್ಲಿ ಹೊತ್ತಿ ಉರಿಯಿತು. ಅವರ ಜೊತೆ ಸಹೋದರ ಅಮರನಾಥ್ ಕೂಡ ನಿಧನ ಹೊಂದಿದರು. ಈ ಘಟನೆ ನಡೆದು 21 ವರ್ಷಗಳು ಕಳೆದಿವೆ. ಈ ಪ್ರಕರಣಕ್ಜೆ ಸಂಬಂಧಿಸಿದಂತೆ ಇದೀಗ ಟಾಲಿವುಡ್​ನ ಖ್ಯಾತ ನಟ, ನಿರ್ಮಾಪಕ ಮೋಹನ್ ಬಾಬು ವಿರುದ್ಧ ದೂರು ದಾಖಲಾಗಿದೆ. ಸೌಂದರ್ಯಾ ಸಾವಿನ ಹಿಂದೆ ಇವರ ಕೈವಾಡ ಇದೆ ಎಂದು ಆರೋಪಿಸಲಾಗಿದೆ. ಈ ವಿಚಾರ ಸಾಕಷ್ಟು ಸಂಚಲನ ಸೃಷ್ಟಿ ಮಾಡಿದೆ.

ಕೌಟುಂಬಿಕ ಸಮಸ್ಯೆ ಕಾರಣದಿಂದ ಮೋಹನ್ ಬಾಬು ಸಾಕಷ್ಟು ಸಮಸ್ಯೆ ಎದುರಿಸಿದ್ದರು. ಈಗ ಅವರು ಸೌಂದರ್ಯಾ ಸಾವಿನ ಪ್ರಕರಣದಲ್ಲಿ ಸಮಸ್ಯೆ ಎದುರಿಸಿದ್ದಾರೆ. ಆಂಧ್ರಪ್ರದೇಶದ ಖಮ್ಮಾಮ್ ಜಿಲ್ಲೆಯಲ್ಲಿ ಮೋಹನ್ ಬಾಬು ವಿರುದ್ಧ ದೂರು ದಾಖಲಾಗಿದೆ. ಸೌಂದರ್ಯಾ ಸಾವಿನ ಹಿಂದೆ ಮೋಹನ್ ಬಾಬು ಕೈವಾಡ ಇದೆ ಎಂದು ದೂರಲಾಗಿದೆ. ಚಿಟ್ಟಿಮಲ್ಲು ಎಂಬುವವರು ಈ ದೂರು ನೀಡಿದ್ದಾರೆ.

‘ಸೌಂದರ್ಯಾ ಅವರದ್ದು ಆಕಸ್ಮಿಕ ಸಾವಲ್ಲ, ಇದೊಂದು ನಿಯೋಜಿತ ಕೊಲೆ. ಜಾಗದ ವಿಚಾರದಲ್ಲಿ ಈ ಕೊಲೆ ನಡೆದಿದೆ. ಸೌಂದರ್ಯಾ ಹಾಗೂ ಅವರ ಸಹೋದರ ಅಮರನಾಥ್ ಶಂಶಾಬಾದ್​ನಲ್ಲಿರುವ 6 ಎಕರೆ ಜಾಗವನ್ನು ಹೊಂದಿದ್ದರು. ಇದನ್ನು ತಮಗೆ ಕೊಡುವಂತೆ ಮೋಹನ್ ಬಾಬು ಕೇಳುತ್ತಿದ್ದರು. ಇದನ್ನು ಮಾರಲು ಸೌಂದರ್ಯಾ ನಿರಾಕರಿಸಿದ್ದರು. ಇದರಿಂದ ಈ ಕೊಲೆ ನಡೆದಿದೆ’ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಸೌಂದರ್ಯಾ ಅವರ ಸಾವಿನ ಬಳಿಕ ಈ ಜಾಗ ಮಾರುವಂತೆ ಅವರ ಕುಟುಂಬದವರಿಗೆ ಮೋಹನ್ ಬಾಬು ಒತ್ತಡ ಹೇರಿದ್ದಾರೆ ಎಂದು ದೂರನಲ್ಲಿ ತಿಳಿಸಲಾಗಿದೆ. ಆ ಬಳಿಕ ಮೋಹನ್ ಬಾಬು ಅವರು ಅಕ್ರಮವಾಗಿ ಈ ಜಾಗವನ್ನು ಪಡೆದುಕೊಂಡರು ಎನ್ನಲಾಗಿದೆ. ಸದ್ಯ ದೂರು ನೀಡಿದ ಚಿಟ್ಟಿಮಲ್ಲು ತಮಗೆ ಪೊಲೀಸ್ ರಕ್ಷಣೆ ಬೇಕು?ಎಂದು ಕೋರಿದ್ದಾರೆ. ಅಲ್ಲದೆ ಈ ಜಾಗವನ್ನು ಸರ್ಕಾರದವರು ವಶಕ್ಕೆ ಪಡೆದು ಅಗತ್ಯ ಇರುವ ವೃದ್ಧಾಶ್ರಮದವರಿಗೆ ನೀಡುವಂತೆ ಕೋರಿದ್ದಾರೆ.

ಸೌಂದರ್ಯಾ ಅವರು ಕನ್ನಡ ಸಿನಿಮಾಗಳನ್ನು ಮಾಡಿ ಗಮನ ಸೆಳೆದರು. ಅವರು ‘ಆಪ್ತಮಿತ್ರ’ ಚಿತ್ರದಲ್ಲಿ ಮಾಡಿದ ನಾಗವಲ್ಲಿ ಪಾತ್ರ ಯಾವಾಗಲೂ ನೆನಪಿನಲ್ಲಿ ಇರುವಂಥದ್ದು. ಅವರು ನಿಧನ ಹೊಂದುವಾಗ ಕೇವಲ 31 ವರ್ಷ ವಯಸ್ಸಾಗಿತ್ತು.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ