LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Politics News

“ಆದ್ಯತೆ ಮೇರೆಗೆ ಗುತ್ತಿಗೆದಾರರ ಬಿಲ್ ಗಳನ್ನು ಪಾವತಿ ಮಾಡಲಾಗುವುದು":ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: “ಆದ್ಯತೆ ಮೇರೆಗೆ ಗುತ್ತಿಗೆದಾರರ ಬಿಲ್ ಗಳನ್ನು ಪಾವತಿ ಮಾಡಲಾಗುವುದು. ಸಣ್ಣ, ಸಣ್ಣ ಬಿಲ್ ಗಳನ್ನು ಪಾವತಿ ಮಾಡುವುದಾಗಿ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳಿಗೆ ಆಶ್ವಾಸನೆ ನೀಡಿದ್ದು, ಹಣ ಬಂದ ತಕ್ಷಣ ಪಾವತಿ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು. ಗುತ್ತಿಗೆದಾರರ ಬಿಲ್ ಬಾಕಿ ವಿಚಾರ ಹಾಗೂ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳ ಭೇಟಿ ಬಗ್ಗೆ ಕೇಳಿದಾಗ, “ಬಿಜೆಪಿ ಕಾಲದಲ್ಲಿ ಅವರು ನನ್ನ ಇಲಾಖೆಯೊಂದರಲ್ಲಿಯೇ ರೂ.1.20 ಲಕ್ಷ ಕೋಟಿ ಮೊತ್ತದ ಕಾಮಗಾರಿಗಳಿಗೆ ಆದೇಶ ನೀಡಿ ಹೋಗಿದ್ದು ಕೆಲಸ ನಡೆಯುತ್ತಿದೆ. ಪ್ರಸ್ತುತ ರೂ.6 ಸಾವಿರ ಕೋಟಿಯಷ್ಟು ಮಾತ್ರ ಬಿಲ್ ನೀಡಲು ಅವಕಾಶವಿದೆ. ಕೇಂದ್ರದಿಂದ 5,300 ಕೋಟಿ ಕೊಡುತ್ತೇವೆ ಎಂದು ಹೇಳಿ ಕೊಟ್ಟಿಲ್ಲ. ಗುತ್ತಿಗೆದಾರರು ಅವರ ನೋವನ್ನು ಹೇಳಿಕೊಂಡಿದ್ದಾರೆ” ಎಂದರು.

ಖರ್ಗೆ ಅವರನ್ನು ಭೇಟಿ ಮಾಡದೆ ಬಿಜೆಪಿ ಕಚೇರಿಗೆ ಹೋಗಲೇ?

ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ  ಭೇಟಿ ಮಾಡಿದ ವಿಚಾರ ಕೇಳಿದಾಗ, "ನಾನು ಖರ್ಗೆ ಅವರನ್ನು ಭೇಟಿ ಮಾಡದೇ ಬಿಜೆಪಿ ಕಚೇರಿಗೆ ಭೇಟಿ ನೀಡಲೇ?. ಅವರು ರಾಷ್ಟ್ರದ ಅಧ್ಯಕ್ಷರು, ನಾನು ರಾಜ್ಯದ ಅಧ್ಯಕ್ಷ. ಅವರು ನಮ್ಮ ರಾಜ್ಯಕ್ಕೆ ಬಂದಾಗ ಹೋಗಿ ಭೇಟಿ ಮಾಡಿ ಗೌರವ ನೀಡುವುದು ನಮ್ಮ ಕೆಲಸ. ಪಕ್ಷದ ವಿಚಾರಗಳು, ನೂತನ ಕಾಂಗ್ರೆಸ್ ಕಚೇರಿಗೆ ಗುದ್ದಲಿ ಪೂಜೆ ಮಾಡುತ್ತಿದ್ದು, ಈ ತಿಂಗಳಿನಲ್ಲಿಯೇ ದಿನಾಂಕ ನೀಡಿ ಎಂದು ಮನವಿ ಮಾಡಲು ಹೋಗಿದ್ದೆ” ಎಂದರು.ಸಂದರ್ಭ ಬೇರೆ ರೀತಿಯಿದ್ದು, ಯಾವುದೇ ಭೇಟಿಗೂ ನಾನಾ ಅರ್ಥಗಳು ಉಂಟಾಗುತ್ತವೆ ಎಂದು ಕೇಳಿದಾಗ, “ಯಾವ ರೀತಿ ಬೇಕಾದರೂ ಅರ್ಥ ಮಾಡಿಕೊಳ್ಳಲಿ, ಸಾವಿರ ಚರ್ಚೆ ಮಾಡಲಿ” ಎಂದು ಹೇಳಿದರು.

ನಟ್ಟು- ಬೋಲ್ಟ್ ವಿಚಾರವಾಗಿ ವಿಪಕ್ಷಗಳು ಟೀಕೆ ಮಾಡುತ್ತಿವೆ ಎಂದು ಕೇಳಿದಾಗ, “ಟೀಕೆ ಮಾಡಲಿ ಎಂದು ನಾನು ಹೇಳಿಕೆ ನೀಡಿದ್ದು. ನಾನು ಅವರಿಗೆಲ್ಲಾ ಎಷ್ಟು ಸಹಾಯ ಮಾಡಿದ್ದೇನೆ ಎನ್ನುವುದು ನನಗೆ ಗೊತ್ತಿದೆ. ಸಹಾಯ ತೆಗೆದುಕೊಂಡವರಿಗೆ ಗೊತ್ತಿದೆ. ನಾನು ಅವರಿಗೆ ರಾಜ್ಯದ ಹಿತಕ್ಕಾಗಿ ಹೇಳಿದ್ದೇನೆ. ನೆಲ, ಜಲ, ಭಾಷೆ ಉಳಿಯಬೇಕು. ಅಂತರಾಷ್ಟ್ರೀಯ ಚಲನಚಿತ್ರ ಉತ್ಸವ ಯಾರಿಗಾಗಿ ಮಾಡಿರುವುದು. ಚಿತ್ರರಂಗ ಬೆಳೆಯಲಿ ಎಂದು. ಅವರ ಕ್ಷೇತ್ರದ ಬಗ್ಗೆ ಅವರೇ ಪ್ರಚಾರ ಮಾಡಿಕೊಳ್ಳದೇ ಇದ್ದರೆ ನಾವು ಬೆಳಗ್ಗೆ ಸಂಜೆ ಪ್ರಚಾರ ಮಾಡಿಕೊಳ್ಳಲು ಆಗುತ್ತದೆಯೇ?” ಎಂದು ತಿರುಗೇಟು ನೀಡಿದರು.

ಚಿತ್ರರಂಗದವರಿಗೆ ಆಹ್ವಾನವನ್ನೇ ಮಾಡಿಲ್ಲ ಎನ್ನುವ ನಾಗಭರಣ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಆಹ್ವಾನ ಮಾಡದೇ ಇರಬಹುದು. ಈ ಬಗ್ಗೆ ನಮ್ಮ ಇಲಾಖೆಯ ತಪ್ಪಿದೆಯೋ ಯಾರ ತಪ್ಪಿದೆ ಗೊತ್ತಿಲ್ಲ. ಆದರೆ ಈ ಕಾರ್ಯಕ್ರಮ ಅವರದ್ದು. ನನಗೆ ಗೊತ್ತು ಟೀಕೆ ಮಾಡುತ್ತಾರೆ ಎಂದು. ಆದರೆ ಎಚ್ಚರಿಕೆ ಕೊಡಬೇಕಲ್ಲವೇ? ಟೀಕೆ ಮಾಡುವುದರಿಂದ ನನಗೆ ಬೇಸರವಿಲ್ಲ. ನಾವು ತಪ್ಪು ಮಾಡಿದ್ದರೇ ಸರಿ ಮಾಡಿಕೊಳ್ಳೋಣ, ಅವರು ತಪ್ಪು ಮಾಡಿದ್ದರೆ ಅವರು ಸರಿ ಮಾಡಿಕೊಳ್ಳಲಿ. ಸಿನಿಮಾ ಇಲ್ಲದೇ ಬದುಕುವ ಶಕ್ತಿ ನನಗಿದೆ. ಅವರು ಬೆಳೆಯಬೇಕು ಎಂದರೆ ಸರ್ಕಾರ ಹಾಗೂ ಜನ ಬೇಕು” ಎಂದು ಖಡಕ್ ಉತ್ತರ ನೀಡಿದರು.

ಬಿಬಿಎಂಪಿ ಸರ್ಕಾರಿ ಕಚೇರಿಗಳಿಗೆ ತೆರಿಗೆ ಬಾಕಿ ಬಗ್ಗೆ ನೋಟಿಸ್ ನೀಡಿರುವ ಬಗ್ಗೆ, “ಹೌದು ಹಣ ಸಂಗ್ರಹ ಮಾಡಬೇಕಲ್ಲವೇ. ಬಿಬಿಎಂಪಿ ಕಾನೂನು ಪ್ರಕಾರ ಕೆಲಸ ಮಾಡುತ್ತಿದೆ. ಸರ್ಕಾರಿ ಕಚೇರಿಯಾದರೂ ಒಂದಷ್ಟು ಬಿಲ್ ಗಳನ್ನು ಕಟ್ಟಲೇ ಬೇಕು. ವಿದ್ಯುತ್ ಬಿಲ್ ಸೇರಿದಂತೆ ಇತರೇ ಬಿಲ್ ಗಳನ್ನು ಕಟ್ಟಲೇಬೇಕು. ಈ ವಿಚಾರ ಕಳೆದ 20- 30 ವರ್ಷಗಳಿಂದ ನಡೆಯುತ್ತಿದೆ” ಎಂದರು.ರಾಜಭವನ, ವಿಧಾನಸೌಧಗಳು ಈ ವ್ಯಾಪ್ತಿಗೆ ಬರುತ್ತವೆಯೇ ಎಂದಾಗ, “ಹೌದು ಎಲ್ಲರೂ ತೆರಿಗೆ ಪಾವತಿ ಮಾಡಲೇಬೇಕು” ಎಂದರು.

ಸರ್ಕಾರಿ ಕಟ್ಟಡಗಳ ಆಸ್ತಿ ತೆರಿಗೆ ಬಾಕಿ ರೂ.150 ಕೋಟಿಗೂ ಹೆಚ್ಚು ಬಾಕಿ ಇದೆ ಎಂದು ಮರು ಪ್ರಶ್ನಿಸಿದಾಗ, “ಎಲ್ಲವನ್ನು ಸಂಗ್ರಹ ಮಾಡಲಾಗುವುದು. ಯಾವುದಕ್ಕೂ ನಾವು ವಿನಾಯಿತಿ ನೀಡಬಾರದು. ಎಲ್ಲರೂ ತೆರಿಗೆ ಕಟ್ಟಲೇಬೇಕು. ವಿದ್ಯುತ್ ಪೂರೈಕೆದಾರರಿಗೆ ನಾವು ಬಿಲ್ ನೀಡದೇ ಇದ್ದರೇ ಶೇ 18 ರಷ್ಟು ಬಡ್ಡಿ ತೆರಬೇಕಾಗುತ್ತದೆ” ಎಂದರು. ಶಾಸಕರ ಸಂಬಳ ಹೆಚ್ಚಳದ ಬಗ್ಗೆ ಕೇಳಿದಾಗ, “ಇದರ ಬಗ್ಗೆ ನನಗೆ ಮಾಹಿತಿಯಿಲ್ಲ” ಎಂದರು.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ