LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Politics News

ಬೆಂಗಳೂರಿನಲ್ಲಿ ಆಗಸ್ಟ್ 4ರಂದು ರಾಹುಲ್ ಗಾಂಧಿ ಪಾದಯಾತ್ರೆ!

Bengaluru: ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಕೇಂದ್ರ ಕ್ಷೇತ್ರದಲ್ಲಿ ಚುನಾವಣಾ ಅಕ್ರಮ ನಡೆದಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಮಹದೇವಪುರದಿಂದ ಚುನಾವಣಾ ಆಯೋಗದ ಕಚೇರಿವರೆಗೂ ಪಾದಯಾತ್ರೆ ನಡೆಯಲಿದೆ. ಈ ಪಾದಯಾತ್ರೆಯಲ್ಲಿ ರಾಹುಲ್ ಗಾಂಧಿ ಭಾಗವಹಿಸಲಿದ್ದಾರೆ.

Siddaramaiah, D K Shivakumar Meet Rahul Gandhi At 10 Janpath - Oneindia News

ಬೆಂಗಳೂರು: ಆಗಸ್ಟ್ 4ರಂದು ಕಾಂಗ್ರೆಸ್ ನಾಯಕ ಹಾಗೂ ಕೇಂದ್ರ ವಿಪಕ್ಷ ನಾಯಕ ರಾಹುಲ್ ಗಾಂಧಿಯವರು ಬೆಂಗಳೂರಿಗೆ  ಆಗಮಿಸಲಿದ್ದಾರೆ. ಅವರು ಮಹದೇವಪುರ ವಿಧಾನಸಭಾ ಕ್ಷೇತ್ರದಿಂದ ಮುಖ್ಯ ಚುನಾವಣಾಧಿಕಾರಿ ಕಚೇರಿವರೆಗೆ ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ರಾಹುಲ್ ಗಾಂಧಿಯವರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್  ಸೇರಿ ಕೈ ನಾಯಕರು ಸಾಥ್ ನೀಡಲಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಕೇಂದ್ರ ಕ್ಷೇತ್ರದಲ್ಲಿ ಚುನಾವಣಾ ಅಕ್ರಮ ನಡೆದಿದೆ. ಮಹದೇವಪುರ ವಿಧಾನಸಭೆ ಕ್ಷೇತ್ರದಲ್ಲಿ ಕೆಲ ಹೆಸರುಗಳನ್ನು ತೆಗೆದುಹಾಕಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ದಾಖಲೆ ಇದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಮಹದೇವಪುರದಿಂದ ಚುನಾವಣಾ ಆಯೋಗದ ಕಚೇರಿವರೆಗೂ ಪಾದಯಾತ್ರೆ ನಡೆಯಲಿದೆ. ಈ ಪಾದಯಾತ್ರೆಯಲ್ಲಿ ಕೈ ನಾಯಕ ರಾಹುಲ್ ಗಾಂಧಿ ಭಾಗವಹಿಸಲಿದ್ದಾರೆ.

Karnataka: Did Rahul Gandhi target Siddaramaiah for loss of power? - India  Today

ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಘಟಾನಘಟಿ ನಾಯಕರು ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ಮತ್ತು ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ.

ರಾಹುಲ್ ಗಾಂಧಿ ರಾಜ್ಯಕ್ಕೆ ಬರುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್, 4ನೇ ತಾರೀಕಿಗೆ ಬರ್ತಾರೆ ಅನ್ನೋದಿದೆ. ಅಧಿಕಾರಿಗಳ ಬಳಿ ಮಾತಾಡಬೇಕು. ಸಿಎಂ ಬಳಿ ಮಾತಾಡ್ತೇನೆ ಎಂದರು. ದರ್ಶನ್ ಫ್ಯಾನ್ಸ್ ವಿಚಾರದಲ್ಲಿ ರಮ್ಯಾಗೆ ಕೆಪಿಸಿಸಿ ಮಹಿಳಾ ಘಟಕ ಬೆಂಬಲ ಘೋಷಣೆ ಹಿನ್ನೆಲೆಯಲ್ಲಿ, ನಮಗೆ ಯಾರು ಬೆಂಬಲ ಕೊಡ್ತಾರೋ, ಅವರಿಗೆ ನಾವೂ ಬೆಂಬಲ ಕೊಡ್ತೇವೆ ಎಂದರು.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ