LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Local News

ಬೇಸಿಗೆ ಬೆಳೆಗೆ ನೀರು ಹಾಯಿಸಲು ಆಗ್ರಹಿಸಿ ಕರೂರಿನಿಂದ ಟಿ.ಬಿ.ಡ್ಯಾಂಗೆ ರೈತರ ಪಾದಯಾತ್ರೆ

ಬಳ್ಳಾರಿ: ತುಂಗಭದ್ರಾ ಡ್ಯಾಂ ವ್ಯಾಪ್ತಿಯ ನಾಲ್ಕು ಜಿಲ್ಲೆಗಳ ರೈತರ ಎರಡನೇ ಬೆಳೆಗೆ (ಬೇಸಿಗೆ ಬೆಳೆ) ನೀರು ಹಾಯಿಸಲು ಒತ್ತಾಯಿಸಿ, ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯು ಸಿರುಗುಪ್ಪ ತಾಲ್ಲೂಕಿನ ಕರೂರಿನಿಂದ ತುಂಗಭದ್ರಾ ಜಲಾಶಯದವರೆಗೆ ಪಾದಯಾತ್ರೆ ನಡೆಸಲಿದೆ.
ನ.12 ಬುಧವಾರದಿಂದ ಕರೂರಿನಿಂದ ಪ್ರಾರಂಭವಾಗುವ ರೈತರ ಪಾದಯಾತ್ರೆಯು ಭಾನುವಾರ ತುಂಗಭದ್ರಾ ಜಲಾಶಯದ ಸ್ಥಳಕ್ಕೆ ತಲುಪಲಿದೆ. ಬೇಸಿಗೆ ಬೆಳೆಗೆ ನೀರು ಹಾಯಿಸಲೇಬೇಕೆಂದು ಆಗ್ರಹಿಸಿ, ರಾಜ್ಯ ರೈತ ಸಂಘವು ಈ ಪಾದಯಾತ್ರೆ ಹಮ್ಮಿಕೊಂಡಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಕರೂರು ಮಾಧವರೆಡ್ಡಿ ತಿಳಿಸಿದ್ದಾರೆ.
ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನ.12ರಂದು ಸಿರುಗುಪ್ಪ ತಾಲೂಕಿನ ಕರೂರಿನಿಂದ ಪಾದಯಾತ್ರೆ ಆರಂಭವಾಗಲಿದೆ. ಕರೂರಿನಿಂದ ಕುರುಗೋಡು ಮಾರ್ಗವಾಗಿ ಕಂಪ್ಲಿಯ ಮೂಲಕ ತೆರಳಿ ನ.16 ರಂದು ತುಂಗಭದ್ರಾ ಜಲಾಶಯವನ್ನು (ಟಿ.ಬಿ. ಡ್ಯಾಂ) ತಲುಪಿ ಅಲ್ಲಿ ರೈತರು ಬೃಹತ್ ಪ್ರತಿಭಟನೆ ಹಾಗೂ ಅನಿರ್ಧಿಷ್ಟಾವಧಿ ಧರಣಿ ನಡೆಸಲಿದ್ದಾರೆ ಎಂದರು.
ರೈತರು ಬೆಳೆದಿರುವ ಈಗಿನ ಬೆಳೆಗೆ ಡಿಸೆಂಬರ್‍ವರೆಗೂ ನೀರು ಪೂರೈಸಬೇಕು. ಆನಂತರ ಬೇಸಿಗೆ ಬೆಳೆಗೂ (ಎರಡನೇ ಬೆಳೆಗೂ) ನೀರು ಬಿಡಬೇಕು ಎಂದರಲ್ಲದೇ, ಟಿ.ಬಿ.ಡ್ಯಾಂನ ಎಲ್ಲಾ ಕ್ರಸ್ಟ್‍ಗೇಟ್‍ಗಳನ್ನು ಮುಂದಿನ ವರ್ಷದ ಜೂನ್ ವೇಳೆಗೆ ಅಳವಡಿಸಬೇಕು ಎಂದು ಕರೂರು ಮಾಧವರೆಡ್ಡಿ ಒತ್ತಾಯಿಸಿದರು.
ತುಂಗಭದ್ರಾ ಡ್ಯಾಂನ ವ್ಯಾಪ್ತಿಯ ಬಳ್ಳಾರಿ, ಕೊಪ್ಪಳ, ವಿಜಯನಗರ ಮತ್ತು ರಾಯಚೂರು ಜಿಲ್ಲೆಗಳ ಸಾವಿರಾರು ರೈತರು ಈ ಪಾದಯಾತ್ರೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ತಿಳಿಸಿದ್ದಾರೆ.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ