LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
State News

ಬೆಂಗಳೂರಿನ ಎರಡನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮೂರು ಸ್ಥಳ ಫೈನಲ್!

ಬೆಂಗಳೂರು: ರಾಜಧಾನಿಯಲ್ಲಿ 2ನೇ ಅಂತಾರಾಷ್ಟ್ರೀಯ ಹಸಿರು ವಿಮಾನ ನಿಲ್ದಾಣಕ್ಕೆ ಮೂರು ಸ್ಥಳಗಳನ್ನು ಆಖೈರು ಮಾಡಲಾಗಿದೆ. ಈ ಜಾಗಗಳ ಪೂರ್ವಕಾರ್ಯ ಸಾಧ್ಯತಾ ಅಧ್ಯಯನಕ್ಕೆಂದು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ (ಎಎಐ) ಬಹುಶಿಸ್ತೀಯ ತಂಡವು ಏ.7ರಿಂದ 9ರೊಳಗೆ ರಾಜ್ಯಕ್ಕೆ ಆಗಮಿಸಲಿದೆ. ಈ ಸಂಬಂಧ ಈಗಾಗಲೇ ಪ್ರಾಧಿಕಾರಕ್ಕೆ ಕೆಎಸ್‍ಐಡಿಸಿ ವತಿಯಿಂದ 1.21 ಕೋಟಿ ಶುಲ್ಕವನ್ನು ಪಾವತಿಸಲಾಗಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ.

ಸದಾಶಿವನಗರದ ತಮ್ಮ ನಿವಾಸದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಕನಕಪುರ ರಸ್ತೆಯಲ್ಲಿ ಎರಡು ಮತ್ತು ನೆಲಮಂಗಲ- ಕುಣಿಗಲ್ ರಸ್ತೆಯಲ್ಲಿ ಒಂದು ಜಾಗವನ್ನು ಈ ಸಲುವಾಗಿ ಗುರುತಿಸಲಾಗಿದೆ ಎಂದರು.

ಉದ್ದೇಶಿತ ವಿಮಾನ ನಿಲ್ದಾಣಕ್ಕೆ ಅಂತಿಮಪಡಿಸಿರುವ ತಾಣಗಳನ್ನು ಬಂದು ಪರಿಶೀಲಿಸುವಂತೆ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ನಮ್ಮ ಇಲಾಖೆಯಿಂದ ಈ ತಿಂಗಳ 5ರಂದು ಪತ್ರ ಬರೆಯಲಾಗಿತ್ತು. ಅದರಂತೆ ತಂಡವು ಬರುತ್ತಿದೆ. ತಂಡದ ಸೂಚನೆಯಂತೆ ನಾವು ಈ ತಾಣಗಳ ಕಂದಾಯ ನಕಾಶೆ, 10 ವರ್ಷಗಳ ಹವಾಮಾನ ವರದಿ, ಈ ಜಾಗಗಳ ಜಾಮಿತೀಯ ಲಕ್ಷಣಗಳನ್ನು ವಿವರಿಸುವ ಚಿತ್ರ, ಭಾರತೀಯ ಸರ್ವೇ ಇಲಾಖೆಯ ನಕಾಶೆ, ಉದ್ದೇಶಿತ ನಿಲ್ದಾಣದಲ್ಲಿನ ಕಾರ್ಯಾಚರಣೆ ಸ್ವರೂಪ (ವಿಎಫ್‍ಆರ್/ಐಎಫ್‍ಆರ್) ತಿಳಿಸುವ ವಿವರ ಮುಂತಾದವನ್ನು ಸಿದ್ಧಪಡಿಸಿಕೊಂಡಿದ್ದೇವೆ ಎಂದು ಅವರು ವಿವರಿಸಿದ್ದಾರೆ.

ಬೆಂಗಳೂರಿನಲ್ಲಿ ಈಗ ಇರುವ ವಿಮಾನ ನಿಲ್ದಾಣದ ಮೇಲೆ ಅತೀವ ಒತ್ತಡವಿದೆ. ಇನ್ನೊಂದೆಡೆಯಲ್ಲಿ, 2033ಕ್ಕೆ ಸರಿಯಾಗಿ 150 ಕಿ.ಮೀ ವ್ಯಾಪ್ತಿಯಲ್ಲಿ ಮತ್ತೊಂದು ವಿಮಾನ ನಿಲ್ದಾಣ ಹೊಂದುವಂತಿಲ್ಲ ಎನ್ನುವ ಷರತ್ತು ಕೊನೆಗೊಳ್ಳಲಿದೆ. ಇವೆಲ್ಲವನ್ನೂ ದೃಷ್ಟಿಯಲ್ಲಿ ಇಟ್ಟುಕೊಂಡು ಎರಡನೆಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಈಗಿನಿಂದಲೇ ಮುಂದಡಿ ಇಡಲಾಗುತ್ತಿದೆ. ಹೀಗೆಯೇ ಮುಂದುವರಿದರೆ 2033ರ ಹೊತ್ತಿಗೆ ಅದು ಬಳಕೆಗೆ ಸಿದ್ಧವಾಗಬಹುದು ಎಂದು ಪಾಟೀಲ ಹೇಳಿದರು.

`ಕೆಲವರು ತುಮಕೂರಿನ ಶಿರಾ ಸಮೀಪ ಉದ್ದೇಶಿತ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕೆಂದು ಆಗ್ರಹಿಸುತ್ತಿದ್ದಾರೆ. ಆದರೆ ಈ ಕಾರ್ಯಬೇಡಿಕೆ ಸಾಧುವಲ್ಲ. ಶಿರಾದಲ್ಲಿ ವಿಮಾನ ನಿಲ್ದಾಣ ಮಾಡಿದರೆ ಶಿವಮೊಗ್ಗ, ವಿಜಯಪುರದಲ್ಲಿ ಇರುವಂತೆ ಅದೇನಿದ್ದರೂ ಜಿಲ್ಲಾ ಮಟ್ಟದ್ದಾಗುತ್ತದೆ ಅμÉ್ಟ. ಬೆಂಗಳೂರಿನ ಜನರಿಗೆ ಅನುಕೂಲ ಆಗಬೇಕಾದರೆ ಅದು ಬೆಂಗಳೂರಿಗೆ ಸನಿಹದಲ್ಲೇ ಇರಬೇಕು. ಆಗ ಮಾತ್ರ ಹೂಡಿಕೆದಾರ ಸಂಸ್ಥೆಗಳು ವಿಮಾನ ನಿಲ್ದಾಣ ನಿರ್ಮಾಣಕ್ಕೆ ಬರುತ್ತಾರೆ. ಇಲ್ಲದಿದ್ಧರೆ ಯೋಜನೆಯೇ ಕಾರ್ಯಸಾಧುವಾಗುವುದಿಲ್ಲ' ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಬಲ್ದೋಟ ಮಾಲಿನ್ಯ, ಸೂಕ್ತ ಕ್ರಮ : ಕೊಪ್ಪಳದಲ್ಲಿ ಬಲ್ದೋಟ ಸಮೂಹವು 54 ಸಾವಿರ ಕೋಟಿ ರೂ. ಹೂಡಿಕೆ ಮಾಡಿ, ಬಹುದೊಡ್ಡ ಉಕ್ಕು ತಯಾರಿಕೆ ಕಾರ್ಖಾನೆ ಸ್ಥಾಪಿಸಲು ಮುಂದಾಗಿದೆ. ಇದರಿಂದ ಮಾಲಿನ್ಯ ಉಂಟಾಗಲಿದೆ ಎಂದು ಗವಿಮಠದ ಸ್ವಾಮೀಜಿಗಳ ನೇತೃತ್ವದಲ್ಲಿ ಹೋರಾಟ ನಡೆಯುತ್ತಿದೆ. ಮಾಲಿನ್ಯದ ಬಗ್ಗೆ ಐಐಎಸ್ಸಿಯಂತಹ ತಟಸ್ಥ ಸಂಸ್ಥೆಯಿಂದ ಅಧ್ಯಯನ ನಡೆಸಲಾಗುತ್ತಿದೆ. ಅದರ ವರದಿಗೆ ಅನುಗುಣವಾಗಿ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಒಬ್ಬ ಸಚಿವನಾಗಿ ನನಗೆ ಉದ್ಯಮಗಳು ಬೆಳೆಯಬೇಕಾದ ಅನಿವಾರ್ಯತೆ ಮತ್ತು ಸಾರ್ವಜನಿಕರ ಧ್ವನಿ ಎರಡೂ ಅರ್ಥವಾಗುತ್ತವೆ. ಇದರಲ್ಲಿ ರಾಜಕೀಯವೇನೂ ಇಲ್ಲ ಎಂದು ಭರವಸೆ ನೀಡಿದರು.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ