LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
State News

ಭೀಕರ ರಸ್ತೆ ಅಪಘಾತ: ಮೂರು ಜನರ ಸಾವು

ರಾಯಚೂರು: ಟ್ರಕ್ ವಾಹನ(ಮಿನಿ ಲಾರಿ) ಮತ್ತು ಬೈಕ್ ನಡುವೆ ಮುಖಾ ಮುಖಿ ಡಿಕ್ಕಿ ಸಂಭವಿಸಿ ಮೂರು ಜನ ಯುವಕರು ಸ್ಥಳದಲ್ಲಿಯೇ ಮೃತ ಪಟ್ಟ ಘಟನೆ ನಸುಕಿನ ಜಾವ 1.30ರ ಸುಮಾರಿಗೆ ನಗರದ ಬಸವೇಶ್ವರ ವೃತ್ತದಲ್ಲಿ ಜರುಗಿದೆ.
ಮಹ್ಮದ ಅಲಿ ಪಾಷಾ (24) ನೂರ ಮಹ್ಮದ್ (19) ಹಾಗೂ ಫಯಾಜ್(26) ಮೃತ ಪಟ್ಟವರಾಗಿದ್ದು, ಇವರೆಲ್ಲರೂ ನಗರದ ಸುಖಣಿ ಕಾಲೋನಿ ಬಡಾವಣೆಯ ನಿವಾಸಿಗಳು ಎಂದು ತಿಳಿದು ಬಂದಿದೆ.
ಮೂವರು ಯುವಕರು ಒಂದೇ ಬೈಕ್ನಲ್ಲಿ ಯರಗೇರಾ ರಸ್ತೆಯಲ್ಲಿ ನಡೆಯುತ್ತಿರುವ ಕ್ರಿಕೇಟ್ ಟೂರ್ನಮೆಂಟ್ ನೋಡಿ ಮನೆಗೆ ಹಿಂತಿರುಗುವಾಗ ಹಿಂಬದಿಯಿಂದ ವೇಗವಾಗಿ ಬಂದ ಗೂಡ್ಸ್ ಟ್ರಕ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಮೂರು ಜನ ಸ್ಥಳದಲ್ಲಿಯೇ ಮೃತಪಟ್ಡಿದ್ದಾರೆ.
ಈ ಸುದ್ದಿ ತಿಳಿಯುತ್ತಿದ್ದಂತೆ ಪೋಲಿಸರು ಸ್ಥಳ ಕ್ಕೆ ಆಗಮಿಸಿ ಮೃತ ಪಟ್ಟವರನ್ನು ಮರಣೋತ್ತರ ಪರಿಕ್ಷೆಗಾಗಿ ರಿಮ್ಸ್ ಆಸ್ಪತ್ರೆಗೆ ಕಳಿಸಲಾಯಿತ್ತು.
ಅಹ್ಮದಬಾದನಿಂದ ಚೆನೈ ಗೆ ಈ ಟ್ರಕ ವಾಹನ ತೆರಳುತ್ತಿತ್ತು ಎಂದು ತಿಳಿದು ಬಂದಿದೆ. ಟ್ರಕ್ ವಾಹನ ಚಾಲಕನನ್ನು ಪೋಲಿಸರು ವಶಕ್ಕೆ ಪಡೆದಿದ್ದಾರೆ.
ಈ ಕುರಿತು ನಗರದ ಟ್ರಾಫಿಕ ಪೋಲಿಸ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ