LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Crime News

ಬೀದರ್‌ನಲ್ಲಿ ಎಟಿಎಂ ಸಿಬ್ಬಂದಿ ಮೇಲೆ ಗುಂಡಿನ ದಾಳಿ, ಇಬ್ಬರು ಸಾವು

ಬೀದರ್: ಬೀದರ್‌ನ ಹೃದಯ ಭಾಗ ಶಿವಾಜಿ ಚೌಕ್‌ನಲ್ಲಿ ಗುರುವಾರ ಎಟಿಎಂಗೆ ಹಣ ತುಂಬಿಸುವ ವೇಳೆ ಹಾಡಹಗಲೇ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಎಟಿಎಂಗೆ ಹಣ ತುಂಬುವ ವಾಹನದ ಹಿಂಭಾಗ ವ್ಯಕ್ತಿಯೊಬ್ಬನ ಶವ ಬಿದ್ದಿದ್ದರೆ, ಕ್ಷಣಮಾತ್ರದಲ್ಲೇ ಸಿನಿಮೀಯ ರೀತಿಯಲ್ಲಿ ಇಬ್ಬರು ದುರ್ಷರ್ಮಿಗಳು ಹಣ ಎಗರಿಸಿ ಪರಾರಿಯಾಗಿದ್ದಾರೆ.
ಬೀದರ್‌ನ ಹೃದಯಭಾಗದಲ್ಲಿ ನಡೆದಿದ್ದೇನು?
ಅದು ಬೀದರ್‌ನ ಹೃದಯ ಭಾಗ ಶಿವಾಜಿ ಚೌಕ್. ಜನ ಎಂದಿನAತೆ ತಮ್ಮ ಕೆಲಸದಲ್ಲಿ ನಿರತರಾಗಿದ್ದರು. ಎಟಿಎಂಗಳಿಗೆ ಹಣ ತುಂಬುವ ವಾಹನವೊಂದು ಅಲ್ಲಿಗೆ ಬಂದಿದೆ. ಹಾಡಹಗಲೇ, ನೋಡ ನೋಡುತ್ತಿದ್ದಂತೆಯೇ ಏಕಾಏಕಿ ದುರ್ಷರ್ಮಿಗಳು ವಾಹನದ ಮೇಲೆ ಗುಂಡಿ ದಾಳಿ ನಡೆಸಿದ್ದಾರೆ. ವಾಹನದಲ್ಲಿದ್ದ ವ್ಯಕ್ತಿ ಗುಂಡಿನ ದಾಳಿಗೆ ಬಲಿಯಾಗಿದ್ದಾನೆ.
ದುಷ್ಕರ್ಮಿಗಳ ದಾಳಿಗೆ ಬಲಿಯಾದ ವ್ಯಕ್ತಿಯನ್ನು ಗಿರಿ ವೆಂಕಟೇಶ್ (ಎಟಿಎಂಗಳಿಗೆ ಹಣ ಹಾಕುವ ಸಿಎಂಎಸ್ ಏಜೆನ್ಸಿಯ ಸಿಬ್ಬಂದಿ) ಎಂದು ಗುರುತಿಸಲಾಗಿದೆ. ಎಂದಿನAತೆ ಇವತ್ತು ಕೂಡ ಎಟಿಎಂಗಳಿಗೆ ಹಣ ಹಾಕಲು ತೆರಳುತ್ತಿದ್ದಾಗ ಬೈಕ್‌ನಲ್ಲಿ ಬಂದ ದುರ್ಷರ್ಮಿಗಳು ಐದು ಬಾರಿ ಗುಂಡಿನ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಗಿರಿ ವೆಂಕಟೇಶ್‌ಗೆ ಗುಂಡು ತಗುಲಿದೆ. ಸ್ಥಳದಲ್ಲೇ ಗಿರಿ ಮೃತಪಟ್ಟಿದ್ದಾರೆ.
ವಾಹನದಲ್ಲಿದ್ದವರಿಗೆ ಖಾರದ ಪುಡಿ ಎರಚಿದ ಇಬ್ಬರು ದುರ್ಷರ್ಮಿಗಳು, ನಂತರ ಗುಂಡಿನ ದಾಳಿ ನಡೆಸಿದ್ದಾರೆ. ಗಿರಿ ವೆಂಕಟೇಶ್ ಸ್ಥಳದಲ್ಲೇ ಸಾವನ್ನಪ್ಪುತ್ತಿದ್ದಂತೆಯೇ ವಾಹನದಲ್ಲಿದ್ದ ಹಣದ ಬಾಕ್ಸ್ ಅನ್ನು ಬೈಕ್‌ನಲ್ಲಿ ಇಟ್ಟುಕೊಂಡು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಸ್ಥಳೀಯರು ಕಲ್ಲು ತೂರಿ, ದುರ್ಷರ್ಮಿಗಳನ್ನು ತಡೆಯಲು ಯತ್ನಿಸಿದರಾದರೂ ಪ್ರಯೋಜನವಾಗಲಿಲ್ಲ. ಈ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದೆ.
ಘಟನೆಯಲ್ಲಿ ಗಾಯಗೊಂಡಿದ್ದ ಶಿವಕುಮಾರ್ (26) ಅವರನ್ನು ಚಿಕಿತ್ಸೆಗಾಗಿ ಬೀದರ್‌ನ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೇ ಅವರು ಸಹ ಅಸುನೀಗಿದ್ದಾರೆ. ಸದ್ಯ ಆರೋಪಿಗಳಿಗಾಗಿ ಬೀದರ್ ಪೊಲೀಸರು ಬಲೆ ಬಿಸಿದ್ದಾರೆ. ಬೈಕ್ ವಾಹನದ ನಂಬರ್ ಟ್ರೇಸ್ ಮಾಡುತ್ತಿದ್ದಾರೆ.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯುದ್ಧ ಆರಂಭವಾಗಿದೆ, ರಣರಂಗದಲ್ಲಿ ಗೆಲುವು ನಮ್ಮದೇ : ಬಿ.ವೈ.ವಿಜಯೇಂದ್ರಭಾರತದ್ದು ಆಕ್ರಮಣದ ಇತಿಹಾಸವಲ್ಲ, ಜ್ಞಾನ ಹಂಚಿದ ಪರಂಪರೆ: ಮೋಹನ್ ಭಾಗವತ್ಮಂತ್ರಾಲಯ ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವಕ್ಕೆ ಶ್ರೀಗಳಿಂದ ಅದ್ದೂರಿ ಚಾಲನೆದಿಢೀರ್ ದೆಹಲಿಗೆ ತೆರಳಿದ ನಾಗೇಂದ್ರ; ಹೈಕಮಾಂಡ್ ಅಂಗಳದಲ್ಲಿ ರಾಜೀನಾಮೆ ಭವಿಷ್ಯ!ಹಂಪಿ ಬಳಿ ಐದು ದಶಕಗಳ ಬಳಿಕ ಹುಲಿ ಪ್ರತ್ಯಕ್ಷ!43.80 ಲಕ್ಷ ಮತದಾರರಿಗೆ ಶೀಘ್ರದಲ್ಲೇ ಚುನಾವಣಾ ಆಯೋಗದ ನೋಟಿಸ್! ಅರ್ಧದಷ್ಟು ಭರ್ತಿಯಾದ ತುಂಗಭದ್ರಾ ಜಲಾಶಯ! 1 ಲಕ್ಷ ಕ್ಯುಸೆಕ್‌ಗೂ ಅಧಿಕ ಒಳಹರಿವುತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!