LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
State News

ರಾಯರ ಮಠದಲ್ಲಿ ಅದ್ದೂರಿಯಾಗಿ ಜರುಗಿದ ವರ್ಧಂತಿ ಉತ್ಸವ

ರಾಯಚೂರು : ಕಲ್ಪವೃಕ್ಷ ಕಾಮಧೇನು ಶ್ರಿಗುರು ರಾಘವೇಂದ್ರ ಸ್ವಾಮಿಗಳವರ ವರ್ಧಂತಿ  ಉತ್ಸವ ಮಂತ್ರಾಲಯ ಮಠದಲ್ಲಿ ಅದ್ದೂರಿಯಾಗಿ ಜರುಗಿತ್ತು. ರಾಯರ ವರ್ಧಂತಿ ಉತ್ಸವದ ಅಂಗವಾಗಿ ಇಂದು ರಾಯರ ಮೂಲ ಬೃಂದಾವನಕ್ಕೆ ಶ್ರೀ ಸುಶಮೀಂದ್ರ ಸ್ವಾಮಿಗಳು ಪಂಚಾಮೃತ ಅಭೀಷೇಕ ನೇರವೇರಿಸಿ ಭಕ್ತರಿಗೆ ಆರ್ಶೀವಚನ ನೀಡಿದರು.
ಮಠದಲ್ಲಿ ವಿವಿಧ ಪವಿತ್ರ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ರೋಮಾಂಚನಕಾರಿಯಾದ ಸಾಂಸ್ಕತಿಕ ಕಾರ್ಯಕ್ರಮಗಳು ಜರುಗಿದವು.
ನಂತರ ಶ್ರೀ ಸುಶಮೀಂದ್ರ ಸ್ವಾಮಿಗಳು ಆದ್ಯಾತ್ಮಿಕವಾಗಿ ಉನ್ನತೀಕರಿಸುವ ನಾದಹಾರಂ ಕಾರ್ಯಕ್ರಮ ಉದ್ಘಾಟಿಸಿದರು. ಈ ನಾದಹಾರಂ ಕಾರ್ಯಕ್ರಮದಲ್ಲಿ ನೂರಾರು ಸಂಗೀತಗಾರರು ಭಗವಂತನ ಮತ್ತು ಶ್ರೀ ರಾಯರ ಸಂಕೀರ್ತನೆಗಳನ್ನು ಏಕಕಾಲಕ್ಕೆ ಹಾಡಿದರು.
ನಾದಹಾರಂ ಕಾರ್ಯಕ್ರಮದಲ್ಲಿ ಸೇರಿದ ಸಾವಿರಾರು ಜನರು ಸಂಗೀತಕ್ಕೆ ತಲೆದೂಗಿದರು.
ನಂತರ ಶ್ರೀಗಳು ರಾಯರು ರಥೋತ್ಸವಕ್ಕೆ ಚಾಲನೆ ನೀಡಿದರು. ನವರತ್ನ ರಥದಲ್ಲಿ ರಾಯರ ಚಿನ್ನದ ಪ್ರತಿಮೆಯನ್ನು ಭಕ್ತಿಪೂರ್ವಕವಾಗಿ ಇರಿಸಲಾಗಿತ್ತು. ಮಠದ ಪ್ರಾಂಗಣದಲ್ಲಿ ರಥೋತ್ಸವವನ್ನುಅದ್ದೂರಿಯಾಗಿ ನಡೆಸಲಾಯಿತು. ವಿವಿಧ ಜಿಲ್ಲೆಗಳಿಂದ ರಾಯರ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು. ನದಿಯಲ್ಲಿ ಪುಣ್ಯ ಸ್ನಾನ ಮಾಡಿ ರಾಯರ ದರ್ಶನ ಮಾಡಿ ಭಕ್ತರು ಪುನಿತರಾದರು.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ