LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
State News

ನ್ಯಾಯಾಲಯದ ಆದೇಶದಂತೆ ಅಭಿಮಾನ್‌ ಸ್ಟುಡಿಯೋದಲ್ಲಿ ವಿಷ್ಣುವರ್ಧನ್‌ ಸಮಾಧಿ ಸ್ಥಳ ತೆರವು: ವಕೀಲ ಕಾರ್ತಿಕ್‌ ವಿ.

ಬೆಂಗಳೂರು, : ಹಿರಿಯ ನಟ ವಿಷ್ಣುವರ್ಧನ್ ಅವರ ಸಮಾಧಿ ಸ್ಥಳವನ್ನು ಅಭಿಮಾನ್ ಸ್ಟೂಡಿಯೋದಿಂದ ರಾಜ್ಯ ಹೈಕೋರ್ಟ್‌ ಆದೇಶದಂತೆ ತೆರವುಗೊಳಿಸಲಾಗಿದೆ ಎಂದು ವಕೀಲ ಕಾರ್ತಿಕ್‌ ವಿ. ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ಈ ವರ್ಷದ ಜನವರಿ 13 ರಂದು ರಾಜ್ಯ ಹೈಕೋರ್ಟ್‌ ನ ನ್ಯಾಯಮೂರ್ತಿ ಆರ್.‌ ದೇವದಾಸ್‌ ಅವರ ಏಕ ಸದಸ್ಯ ಪೀಠ ಸಮಾಧಿ ಸ್ಥಳವನ್ನು ತೆರುವುಗೊಳಿಸುವಂತೆ ಆದೇಶ ನೀಡಿತ್ತು. ಆದ್ಯತೆಯ ಮೇರೆಗೆ ಸಮಾಧಿ ತೆರವುಗೊಳಿಸುವಂತೆ ಪ್ರತಿವಾದಿಗಳಾದ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮತ್ತು ಬೆಂಗಳೂರು ನಗರದ ವಿಶೇಷ ಜಿಲ್ಲಾಧಿಕಾರಿಗಳಿಗೆ ಸೂಚಿಸಿತ್ತು ಎಂದಿದ್ದಾರೆ.

Vishnuvardhan Memorial Demolished: Sahasa Simha's Samadhi Razed, Fans  Outraged Across Karnataka - Oneindia News

ಬಾಲಕೃಷ್ಣ ಅವರ ಮೊಮ್ಮಗ ಬಿ.ಎಸ್.‌ ಕಾರ್ತಿಕ್ ಕಾನೂನು ಹೋರಾಟ  ನಡೆಸಿದ್ದರು. ನ್ಯಾಯಾಲಯದ ಆದೇಶದಂತೆ ಎರಡು ತಿಂಗಳ ನಂತರವೂ ಸಮಾಧಿ ಸ್ಥಳವನ್ನು ತೆರವುಗೊಳಿಸಿರಲಿಲ್ಲ. ಆದರೆ ಕಳೆದ 2020 ರ ಜನವರಿ 10 ರಂದು ಡಾ. ವಿಷ್ಣುವರ್ಧನ್‌ ಅವರ ಸಮಾಧಿ ಸ್ಥಳವನ್ನು ಮೈಸೂರಿಗೆ ಸ್ಥಳಾಂತರಿಸುವಂತೆ ಸರ್ಕಾರ ಆದೇಶ ಹೊರಡಿಸಿತ್ತು. ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲು ಸರ್ಕಾರ 2.5 ಎಕರೆ ಭೂಮಿಯನ್ನು ಸಹ ಸರ್ಕಾರ ಮಂಜೂರು ಮಾಡಿತ್ತು ಎಂದು ಅವರು ಹೇಳಿದ್ದಾರೆ.

ಆದೇಶ ನೀಡಿದ ಎರಡು ತಿಂಗಳಲ್ಲಿ ಸಮಾಧಿ ಸ್ಥಳವನ್ನು ತೆರವು ಮಾಡದ ಕಾರಣ ನ್ಯಾಯಾಲಯದ ಆದೇಶದಂತೆ ಪೊಲೀಸರ ಸಮ್ಮುಖದಲ್ಲಿ ಸಮಾಧಿ ಸ್ಥಳವನ್ನು ತೆರವು ಮಾಡಲಾಗಿದೆ ಎಂದು ವಕೀಲರಾದ ಕಾರ್ತಿಕ್‌ ವಿ ತಿಳಿಸಿದ್ದಾರೆ.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ