LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
State News

ಮತದಾರರ ಹಕ್ಕು ರಕ್ಷಣೆ ರಾಜಕೀಯ ಪಕ್ಷಗಳ ಕರ್ತವ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

ಮತದಾರರ ಹಕ್ಕು ರಕ್ಷಣೆ ರಾಜಕೀಯ ಪಕ್ಷಗಳ ಕರ್ತವ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು,ಆ.6:“ಮತಗಳ್ಳತನ ವಿಚಾರವನ್ನು ನಮ್ಮ ಹೈಕಮಾಂಡ್ ನಾಯಕರು ಗಂಭೀರವಾಗಿ ಪರಿಗಣಿಸಿದ್ದು, ಮತದಾರರ ಹಕ್ಕಿನ ರಕ್ಷಣೆ ಮಾಡಬೇಕಾಗಿರುವುದು ರಾಜಕೀಯ ಪಕ್ಷಗಳ ಕರ್ತವ್ಯ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಗಸ್ಟ್ 8ರಂದು ನಡೆಯಲಿರುವ ಪ್ರತಿಭಟನೆ ಬಗ್ಗೆ ಕೇಳಿದಾಗ, “ನಮ್ಮ ಮೈತ್ರಿ ನಾಯಕ ಶಿಬು ಸೊರೇನ್ ಅವರ ನಿಧನವಾದ ಕಾರಣಕ್ಕೆ ಆಗಸ್ಟ್ 5ರಂದು ನಡೆಸಬೇಕಾಗಿದ್ದ ಪ್ರತಿಭಟನೆಯನ್ನು ಆಗಸ್ಟ್ 8ಕ್ಕೆ ಮುಂದೂಡಲಾಯಿತು. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು 8ರ ಬೆಳಗ್ಗೆ 10.30ಕ್ಕೆ ಆಗಮಿಸಲಿದ್ದು, ಚುನಾವಣೆ ಸಮಯದಲ್ಲಿ ಆಗಿರುವ ಅಕ್ರಮಗಳ ಬಗ್ಗೆ ದಾಖಲೆಗಳ ಸಮೇತ ಆಯೋಗಕ್ಕೆ ಮನವರಿಕೆ ಮಾಡಿಕೊಡುವ ಪ್ರಯತ್ನ ಮಾಡುತ್ತೇವೆ” ಎಂದು ತಿಳಿಸಿದರು. Staunch Congressman, crisis manager: What justifies DK Shivakumar's claim  to Karnataka CM post - India Today

ಆಯೋಗಕ್ಕೆ ಯಾವ ದಾಖಲೆಗಳನ್ನು ನೀಡುತ್ತೀರಿ ಎಂದು ಕೇಳಿದಾಗ, “ಈ ವಿಚಾರವನ್ನು ನಾನು ಬಹಿರಂಗಪಡಿಸುವುದಿಲ್ಲ. ಇದು ರಾಷ್ಟ್ರೀಯ ವಿಚಾರ ಆಗಿರುವ ಹಿನ್ನೆಲೆಯಲ್ಲಿ ನಮ್ಮ ನಾಯಕರು ಮಾಧ್ಯಮಗೋಷ್ಠಿ ನಡೆಸಿ ಮಾಹಿತಿ ನೀಡಲಿದ್ದಾರೆ” ಎಂದು ತಿಳಿಸಿದರು.

ಮೆರವಣಿಗೆ ನಡೆಯಲಿದೆಯೇ ಎಂದು ಕೇಳಿದಾಗ, “ಸ್ವಾತಂತ್ರ್ಯ ಉದ್ಯಾನದಲ್ಲಿ ಕಾನೂನು ಚೌಕಟ್ಟಿನಲ್ಲಿ ಪ್ರತಿಭಟನೆ ನಡೆಯಲಿದೆ” ಎಂದು ತಿಳಿಸಿದರು.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ